ಮೈಸೂರಿನ ಶಕ್ತಿಧಾಮದಲ್ಲಿ ಮಕ್ಕಳ ಜೊತೆ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದ ಶಿವರಾಜ್​ಕುಮಾರ್

Updated on: Aug 15, 2023 | 9:49 AM

ಇಂದು (ಆಗಸ್ಟ್ 15) ಅವರು ಮೈಸೂರಿಗೆ ತೆರಳಿದ್ದಾರೆ. ಶಕ್ತಿಧಾಮದ ಮಕ್ಕಳ ಜೊತೆ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದ್ದಾರೆ. ಧ್ವಜಾರೋಹಣ ಮಾಡಿ ಮಕ್ಕಳ ಜೊತೆ ಸಂಭ್ರಮಿಸಿದ್ದಾರೆ. ಧ್ವಜಾರೋಹಣದ ಬಳಿಕ ಮಕ್ಕಳಿಗೆ ಸಿಹಿ ವಿತರಿಸಲಾಗಿದೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ರಾಜ್​ಕುಮಾರ್ ಆರಂಭಿಸಿದ ಶಕ್ತಿಧಾಮದ ಉಸ್ತುವಾರಿ ಶಿವಣ್ಣ (Shivanna) ಹಾಗೂ ಗೀತಾ ಶಿವರಾಜ್​ಕುಮಾರ್ ಅವರ ಹೆಗಲೇರಿದೆ. ಹೀಗಾಗಿ ಶಿವರಾಜ್​ಕುಮಾರ್ ಅವರು ಆಗಾಗ ಅಲ್ಲಿಗೆ ತೆರಳುತ್ತಾರೆ. ಇಂದು (ಆಗಸ್ಟ್ 15) ಅವರು ಮೈಸೂರಿಗೆ ತೆರಳಿದ್ದಾರೆ. ಶಕ್ತಿಧಾಮದ ಮಕ್ಕಳ ಜೊತೆ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದ್ದಾರೆ. ಧ್ವಜಾರೋಹಣ ಮಾಡಿ ಮಕ್ಕಳ ಜೊತೆ ಸಂಭ್ರಮಿಸಿದ್ದಾರೆ. ಧ್ವಜಾರೋಹಣದ ಬಳಿಕ ಮಕ್ಕಳಿಗೆ ಸಿಹಿ ವಿತರಿಸಲಾಗಿದೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಶಿವರಾಜ್​ಕುಮಾರ್ ಅವರು ರಜನಿಕಾಂತ್ (Rajinikanth) ಜೊತೆ ನಟಿಸಿದ ‘ಜೈಲರ್’ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More