‘ಚರಂಡಿ ಕ್ಲೀನ್ ಮಾಡುವವನ ಪಾತ್ರ ಮಾಡ್ತೀನಿ’: ದುನಿಯಾ ವಿಜಯ್ ನಿರ್ದೇಶನದಲ್ಲಿ ಶಿವಣ್ಣನಿಗೆ ನಟಿಸುವ ಆಸೆ
‘ಸಲಗ’ ಸಿನಿಮಾದ ಪ್ರೀ-ರಿಲೀಸ್ ಕಾರ್ಯಕ್ರಮಕ್ಕೆ ಶಿವರಾಜ್ಕುಮಾರ್ ಅತಿಥಿಯಾಗಿ ಆಗಮಿಸಿದ್ದರು. ಮುಂದಿನ ದಿನಗಳಲ್ಲಿ ಯಾವ ರೀತಿಯ ಪಾತ್ರ ಮಾಡಬೇಕು ಎಂಬ ಆಸೆಯನ್ನು ಶಿವಣ್ಣ ಹೇಳಿಕೊಂಡರು.
ನಟ ದುನಿಯಾ ವಿಜಯ್ ಅವರು ಮೊದಲ ಬಾರಿಗೆ ‘ಸಲಗ’ ಸಿನಿಮಾ ಮೂಲಕ ನಿರ್ದೇಶಕನಾಗಿದ್ದಾರೆ. ಒಂದು ವೇಳೆ, ಅವರ ನಿರ್ದೇಶನದಲ್ಲಿ ತಾವು ನಟಿಸುವುದಾದರೆ ಒಂದು ಭಿನ್ನ ಪಾತ್ರ ಮಾಡುವುದಾಗಿ ಶಿವರಾಜ್ಕುಮಾರ್ ಹೇಳಿದ್ದಾರೆ. ‘ಸಲಗ’ ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮ ಭಾನುವಾರ (ಅ.10) ನಡೆಯಿತು. ಈ ಸಮಾರಂಭಕ್ಕೆ ಅತಿಥಿಯಾಗಿ ಆಗಮಿಸಿದ್ದ ಶಿವರಾಜ್ಕುಮಾರ್ ಅವರು ಕೆಲವು ಮಾತುಗಳನ್ನು ಹಂಚಿಕೊಂಡರು.
‘ಈಗ ಮಾಡುತ್ತಿರುವುದೆಲ್ಲ ಬಿಟ್ಟು ಬೇರೆ ಏನಾದರೂ ಮಾಡಬೇಕು. ಡ್ರೈನೇಜ್ ಕ್ಲೀನ್ ಮಾಡುವವರ ಪಾತ್ರವನ್ನೂ ಮಾಡಬೇಕು. ಯಾಕೆಂದರೆ ಈ ಸಮಾಜದಲ್ಲಿ ಕ್ಲೀನ್ ಮಾಡಬೇಕಿರುವುದು ಬಹಳ ಇದೆ’ ಎಂದು ಶಿವಣ್ಣ ಹೇಳಿದರು. ಈ ಪ್ರೀ ರಿಲೀಸ್ ಇವೆಂಟ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕೂಡ ಸಾಕ್ಷಿಯಾಗಿದ್ದರು. ಸಲಗ ತಂಡಕ್ಕೆ ಅವರು ಕೂಡ ಶುಭ ಕೋರಿದರು. ಈ ಚಿತ್ರಕ್ಕೆ ಕೆ.ಪಿ. ಶ್ರೀಕಾಂತ್ ಬಂಡವಾಳ ಹೂಡಿದ್ದಾರೆ.
ಇದನ್ನೂ ಓದಿ:
ಶಿವಣ್ಣನಿಗೆ ಅಪ್ಪು ನಿರ್ದೇಶನ, ಉಪ್ಪಿ ಅಸಿಸ್ಟೆಂಟ್ ಡೈರೆಕ್ಟರ್, ಸಂತೋಷ್ ಆನಂದ್ರಾಮ್ ಡೈಲಾಗ್ ರೈಟರ್
ಸ್ಟಾರ್ ನಟರ ಮುಖಾಮುಖಿ; ಈಗ ಚಿತ್ರರಂಗದಲ್ಲಿ ಹೊಂದಾಣಿಕೆ ಮುಖ್ಯ ಎಂದ ಶಿವರಾಜ್ಕುಮಾರ್
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

