‘ನಮ್ಮ ಇಂಡಸ್ಟ್ರಿ ಬೆಳೆಯಬೇಕು’; ರಮ್ಯಾ ಕೇಸ್ ಬಗ್ಗೆ ಪ್ರತಿಕ್ರಿಯಿಸಿದ ಶಿವರಾಜ್​ಕುಮಾರ್

Updated on: Jul 22, 2023 | 2:34 PM

ಇತ್ತೀಚೆಗೆ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ತಂಡದ ವಿರುದ್ಧ ರಮ್ಯಾ ಕೇಸ್ ಹಾಕಿದ್ದರು. ಈ ಬಗ್ಗೆ ಶಿವರಾಜ್​ಕುಮಾರ್ ಅವರು ಮಾತನಾಡಿದ್ದಾರೆ.

ಶಿವರಾಜ್​ಕುಮಾರ್ (Shivarajkumar) ಅವರು ಸ್ಯಾಂಡಲ್​​ವುಡ್​ನಲ್ಲಿ ಲೀಡರ್ ರೀತಿ ಇದ್ದಾರೆ. ಏನೇ ಸಮಸ್ಯೆ ಉಂಟಾದರೂ ಅವರು ಅದನ್ನು ಪರಿಹರಿಸಲು ಪ್ರಯತ್ನಿಸುತ್ತಾರೆ. ಇತ್ತೀಚೆಗೆ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ತಂಡದ ವಿರುದ್ಧ ರಮ್ಯಾ ಕೇಸ್ ಹಾಕಿದ್ದರು. ಈ ಬಗ್ಗೆ ಶಿವರಾಜ್​ಕುಮಾರ್ ಅವರು ಮಾತನಾಡಿದ್ದಾರೆ. ‘ಬೇರೆಯವರ ಬಗ್ಗೆ ಕಮೆಂಟ್ ಮಾಡಿದ್ದಾರೆ. ಸಿನಿಮಾ ರಿಸಲ್ಟ್ ಏನು ಬಂದಿದೆ ಅನ್ನೋದು ಮುಖ್ಯ. ಒಳ್ಳೆಯ ಮನಸ್ಸಿನಿಂದ ಮಾಡಿದರೆ ಯಾವ ಅಡೆತಡೆಯೂ ಬರಲ್ಲ. ಸತ್ಯ ಇದ್ದಲ್ಲಿ ಜಯ ಇದೆ. ನಮ್ಮ ಇಂಡಸ್ಟ್ರಿ ಬೆಳೆಯಬೇಕು’ ಎಂದರು ಶಿವಣ್ಣ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More