ಅಶ್ವಿನಿ ಪುನೀತ್​-ಶೋಭಾ ಕರಂದ್ಲಾಜೆ ಭೇಟಿ ಬಗ್ಗೆ ಶಿವಣ್ಣ ಮೊದಲ ಪ್ರತಿಕ್ರಿಯೆ

|

Updated on: Mar 24, 2024 | 5:57 PM

ಕಾಂಗ್ರೆಸ್​ ಪಕ್ಷದಿಂದ ಗೀತಾ ಶಿವರಾಜ್​ಕುಮಾರ್​ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಅವರ ಪರವಾಗಿ ಶಿವರಾಜ್​ಕುಮಾರ್​ ಪ್ರಚಾರ ಮಾಡುತ್ತಿದಾರೆ. ಇತ್ತ, ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭ ಕರಂದ್ಲಾಜೆ ಅವರು ಅಶ್ವಿನಿ ಪುನೀತ್ ರಾಜ್​ಕುಮಾರ್​ ಅವರನ್ನು ಭೇಟಿ ಮಾಡಿದ್ದರ ಬಗ್ಗೆ ಶಿವಣ್ಣ ಪ್ರತಿಕ್ರಿಯಿಸಿದ್ದಾರೆ.

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಾಗ ಸೆಲೆಬ್ರಿಟಿಗಳನ್ನು ರಾಜಕಾರಣಿಗಳು ಭೇಟಿ ಮಾಡುವುದು ಹೆಚ್ಚುತ್ತಿದೆ. ಕೆಲವೇ ದಿನಗಳ ಹಿಂದೆ ಅಶ್ವಿನಿ ಪುನೀತ್ ರಾಜ್​ಕುಮಾರ್​ (Ashwini Puneeth Rajkumar) ಅವರ ಮನೆಗೆ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಭೇಟಿ ನೀಡಿದ್ದರು. ಈ ಭೇಟಿಯ ಬಗ್ಗೆ ಶಿವರಾಜ್​ಕುಮಾರ್​ ಅವರು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ಗೀತಾ ಶಿವರಾಜ್​ಕುಮಾರ್​ (Geetha Shivarajkumar) ಪರ ಚುನಾವಣಾ ಪ್ರಚಾರ ಮಾಡುವಾಗ ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ಎಲ್ಲರೂ ಭೇಟಿ ಮಾಡುತ್ತಾರೆ. ಮಾಡಲಿ ಬಿಡಿ, ಅದರಲ್ಲಿ ತಪ್ಪೇನು ಇದೆ?’ ಎಂದು ಶಿವಣ್ಣ ಮರುಪ್ರಶ್ನೆ ಹಾಕಿದ್ದಾರೆ. ಇನ್ನು, ಶಿವರಾಜ್​ಕುಮಾರ್​ (Shivarajkumar) ಅವರ ಸಿನಿಮಾ, ಜಾಹೀರಾತು, ಬಿಲ್​ಬೋರ್ಡ್​ಗಳ ಪ್ರದರ್ಶನಕ್ಕೆ ನಿಷೇಧ ಹೇರಬೇಕು ಎಂದು ಬಿಜೆಪಿ ಒಬಿಸಿ ಮೋರ್ಚಾ ದೂರು ನೀಡಿತ್ತು. ಆ ಬಗ್ಗೆ ಉತ್ತರಿಸಿದ ಶಿವಣ್ಣ, ‘ನನ್ನ ತಾಯಾಣೆಗೂ ಗೊತ್ತಿಲ್ಲ. ಅದನ್ನು ನಮ್ಮ ಲೀಗಲ್​ ಟೀಮ್​ ನೋಡಿಕೊಳ್ಳುತ್ತಾರೆ’ ಎಂದು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us on