‘ಅಭಿಮಾನಿಗಳಿಗೆ ಖಂಡಿತಾ ಅಪ್ಪು ಸಮಾಧಿ ದರ್ಶನಕ್ಕೆ ಅವಕಾಶ ಕೊಡ್ತೀವಿ, ಆದರೆ 2 ದಿನ ಕಾಯಿರಿ’: ಶಿವಣ್ಣ

| Updated By: ಮದನ್​ ಕುಮಾರ್​

Updated on: Nov 02, 2021 | 9:58 AM

ಪುನೀತ್​ ರಾಜ್​ಕುಮಾರ್ ಸಮಾಧಿ ದರ್ಶನ ಮಾಡಲು ಅಭಿಮಾನಿಗಳಿಗೆ ಇನ್ನೂ ಅವಕಾಶ ಸಿಕ್ಕಿಲ್ಲ. ದೂರದೂರದ ಊರುಗಳಿಂದ ಅಪಾರ ಸಂಖ್ಯೆಯ ಜನರು ಬಂದು ಕಾಯುತ್ತಿದ್ದಾರೆ.

ಹೃದಯಾಘಾತದಿಂದ ಶುಕ್ರವಾರ (ಅ.29) ನಿಧನರಾದ ಪುನೀತ್​ ರಾಜ್​ಕುಮಾರ್​ ಅವರ ಸಮಾಧಿಗೆ ಕುಟುಂಬದವರು ಇಂದು (ನ.2) ಹಾಲು-ತುಪ್ಪ ಅರ್ಪಿಸುವ ಕಾರ್ಯ ಮಾಡುತ್ತಿದ್ದಾರೆ. ಬೆಳಗ್ಗೆ 11 ಗಂಟೆಗೆ ಈ ಕಾರ್ಯ ನಡೆಯಲಿದೆ. ಆದರೆ ಅಪ್ಪು ಸಮಾಧಿ ದರ್ಶನ ಮಾಡಲು ಅಭಿಮಾನಿಗಳಿಗೆ ಇನ್ನೂ ಅವಕಾಶ ಸಿಕ್ಕಿಲ್ಲ. ದೂರದೂರದ ಊರುಗಳಿಂದ ಅಪಾರ ಸಂಖ್ಯೆಯ ಜನರು ಬಂದು ಸಮಾಧಿ ದರ್ಶನಕ್ಕಾಗಿ ಕಾಯುತ್ತಿದ್ದಾರೆ. ‘ಇನ್ನು ಎರಡು ದಿನ ಕಾಯಿರಿ’ ಎಂದು ಅವರಿಗೆಲ್ಲ ಶಿವರಾಜ್​ಕುಮಾರ್​ ಮನವಿ ಮಾಡಿಕೊಂಡಿದ್ದಾರೆ.

‘ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಬರುತ್ತಲೇ ಇದ್ದಾರೆ. ಆದರೆ ಸಮಾಧಿ ನೋಡಲು ಯಾರಿಗೂ ಈಗ ಅವಕಾಶ ಇಲ್ಲ. ಶೀಘ್ರವೇ ಅವಕಾಶ ಮಾಡಿಕೊಡುತ್ತೇವೆ. ಮಕ್ಕಳು ಮತ್ತು ಮನೆಯವರಿಂದ ಮಂಗಳವಾರ ಹಾಲು-ತುಪ್ಪ ಕಾರ್ಯ ಮಾಡಿಸಬೇಕು. ಅದೊಂದು ಕಾರ್ಯ ಮುಗಿಸಿದ ಬಳಿಕವೇ ಬೇರೆಯವರಿಗೆ ಅನುಮತಿ ನೀಡೋಣ ಅಂತ ತೀರ್ಮಾನಿಸಿದ್ದೇವೆ’ ಎಂದು ರಾಘಣ್ಣ ಹೇಳಿದ್ದರು.

ಇದನ್ನೂ ಓದಿ:

ಪುನೀತ್​ ಅಂತ್ಯಕ್ರಿಯೆ ಮರುದಿನ ಹೇಗಿದೆ ಶಿವಣ್ಣನ ದಿನಚರಿ? ನೋವು ನುಂಗಿಕೊಂಡು ಮುಂದಿನ ಹೆಜ್ಜೆ ಇಟ್ಟ ಶಿವರಾಜ್​ಕುಮಾರ್​

Puneeth Rajkumar: ಪುನೀತ್​ ಬಗ್ಗೆ ಅವಹೇಳನಕಾರಿ ಪೋಸ್ಟ್​ ಮಾಡಿದ್ದ ವ್ಯಕ್ತಿ ಅರೆಸ್ಟ್​; ಸೈಬರ್​ ಪೊಲೀಸರ ಬಲೆಗೆ ಬಿದ್ದ ಕಿಡಿಗೇಡಿ

Follow us on