AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೀತಾ ಸರಿಯಾಗಿ ಕೆಲಸ ಮಾಡದಿದ್ರೆ ಹೆಸರು ಚೇಂಜ್ ಮಾಡ್ಕೋತೀನಿ ಎಂದ ಶಿವರಾಜ್​ಕುಮಾರ್

ಗೀತಾ ಸರಿಯಾಗಿ ಕೆಲಸ ಮಾಡದಿದ್ರೆ ಹೆಸರು ಚೇಂಜ್ ಮಾಡ್ಕೋತೀನಿ ಎಂದ ಶಿವರಾಜ್​ಕುಮಾರ್

ರಾಜೇಶ್ ದುಗ್ಗುಮನೆ
|

Updated on: Mar 26, 2024 | 8:44 AM

Share

ಶಿವರಾಜ್​ಕುಮಾರ್ ಅವರು ಶಿವಮೊಗ್ಗದಲ್ಲಿ ಪತ್ನಿ ಗೀತಾ ಪರವಾಗಿ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಗೀತಾ ಅವರು ಕಾಂಗ್ರೆಸ್ ಟಿಕೆಟ್ ಪಡೆದು ಸ್ಪರ್ಧಿಸಿದ್ದಾರೆ. ಶಿವರಾಜ್​ಕುಮಾರ್ ಅವರು ಇತ್ತೀಚೆಗೆ ಶಿವಮೊಗ್ಗದಲ್ಲಿ ಮಾತನಾಡಿದ್ದಾರೆ.

ಶಿವರಾಜ್​ಕುಮಾರ್ (Shivarajkumar) ಅವರು ಶಿವಮೊಗ್ಗದಲ್ಲಿ ಪತ್ನಿ ಗೀತಾ ಪರವಾಗಿ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಗೀತಾ ಅವರು ಕಾಂಗ್ರೆಸ್ ಟಿಕೆಟ್ ಪಡೆದು ಸ್ಪರ್ಧಿಸಿದ್ದಾರೆ. ಶಿವರಾಜ್​ಕುಮಾರ್ ಅವರು ಇತ್ತೀಚೆಗೆ ಶಿವಮೊಗ್ಗದಲ್ಲಿ ಮಾತನಾಡಿದ್ದಾರೆ. ಪತ್ನಿ ಗೆದ್ದರೆ ಜನರ ಪರವಾಗಿ ಅವರು ಕೆಲಸ ಮಾಡುತ್ತಾರೆ ಎನ್ನುವ ಭರವಸೆ ನೀಡಿದ್ದಾರೆ. ‘ಗೀತಾಗೆ ಅವಕಾಶ ಕೊಟ್ಟುನೋಡಿ. ಅವರು ಜನರ ಪರವಾಗಿ ಕೆಲಸ ಮಾಡ್ತಾರೆ. ಆ ಬಳಿಕವೂ ಅವರು ಸರಿಯಾದ ಅಭ್ಯರ್ಥಿನ ಆಯ್ಕೆ ಮಾಡಿಲ್ಲ ಎನಿಸಿದರೆ ಹೆಸರು ಚೇಂಜ್ ಮಾಡ್ಕೋತೀನಿ. ಮಾತು ಕೊಟ್ಟಮೇಲೆ ಅದನ್ನು ಫಾಲೋ ಮಾಡ್ತೀವಿ’ ಎಂದು ಶಿವಣ್ಣ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More