ಅಭಿಮಾನಿಗಳಿಗೆ ಪ್ರೀತಿಯಿಂದ ಊಟ ಬಡಿಸಿದ ಶಿವರಾಜ್​ಕುಮಾರ್​, ಅಶ್ವಿನಿ

20 ಸಾವಿರ ಜನರಿಗೆ ಮಾಂಸಾಹಾರಿ ಊಟದ ವ್ಯವಸ್ಥೆ ಮಾಡಲಾಗಿದೆ. 5 ಸಾವಿರ ಜನರಿಗೆ ಸಸ್ಯಾಹಾರಿ ಊಟಕ್ಕೆ ವ್ಯವಸ್ಥೆ ನಡೆಸಲಾಗಿದೆ. ಅಪಾರ ಸಂಖ್ಯೆಯಲ್ಲಿ ಜನರು ಬರುತ್ತಿದ್ದಾರೆ. ಒಟ್ಟು 25 ಸಾವಿರ ಜನಕ್ಕೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ.

ಅಭಿಮಾನಿಗಳಿಗೆ ಪ್ರೀತಿಯಿಂದ ಊಟ ಬಡಿಸಿದ ಶಿವರಾಜ್​ಕುಮಾರ್​, ಅಶ್ವಿನಿ
| Updated By: ರಾಜೇಶ್ ದುಗ್ಗುಮನೆ

Updated on:Nov 09, 2021 | 2:31 PM

ಪುನೀತ್​ ರಾಜ್​ಕುಮಾರ್ (Puneeth Rajkumar)​ ದೊಡ್ಡ ಅಭಿಮಾನಿ ಬಳಗವನ್ನು ತೊರೆದು ಹೋಗಿದ್ದಾರೆ. ಅವರು ಸಿನಿಮಾ ಹಾಗೂ ಸಾಮಾಜಿಕ ಕೆಲಸದ ಮೂಲಕ ಜನರ ಮನದಲ್ಲಿ ಅಚ್ಚು ಮೂಡಿಸಿ ಹೋಗಿದ್ದಾರೆ. ಅವರು ಅಗಲಿ ಇಂದಿಗೆ (ನವೆಂಬರ್​ 9) 12 ದಿನಗಳಾಗಿವೆ. ಈ ಕಾರಣಕ್ಕೆ ದೊಡ್ಮನೆ ಕುಟುಂಬ ಅಭಿಮಾನಿಗಳಿಗೆ ಅನ್ನಸಂತರ್ಪಣೆ ಮಾಡಿದೆ. ಪುನೀತ್​ ರಾಜ್​ಕುಮಾರ್​ ಹೆಸರಲ್ಲಿ ಈ ಕಾರ್ಯಕ್ರಮ ನಡೆದಿದೆ. ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಸಕಲ ವ್ಯವಸ್ಥೆ ಮಾಡಲಾಗಿದೆ.

20 ಸಾವಿರ ಜನರಿಗೆ ಮಾಂಸಾಹಾರಿ ಊಟದ ವ್ಯವಸ್ಥೆ ಮಾಡಲಾಗಿದೆ. 5 ಸಾವಿರ ಜನರಿಗೆ ಸಸ್ಯಾಹಾರಿ ಊಟಕ್ಕೆ ವ್ಯವಸ್ಥೆ ನಡೆಸಲಾಗಿದೆ. ಅಪಾರ ಸಂಖ್ಯೆಯಲ್ಲಿ ಜನರು ಬರುತ್ತಿದ್ದಾರೆ. ಒಟ್ಟು 25 ಸಾವಿರ ಜನಕ್ಕೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಊಟದ ಸಂದರ್ಭದಲ್ಲಿ ನೂಕುನುಗ್ಗಲು ಆಗದಿರಲಿ ಎನ್ನುವ ಕಾರಣಕ್ಕೆ ಅರಮನೆ ಮೈದಾನದ ಸುತ್ತಮುತ್ತ ಪೊಲೀಸ್​ ಬಂದೋಬಸ್ತ್ ನಿಯೋಜಿಸಲಾಗಿದೆ. ಪುನೀತ್​ ಸಹೋದರ ಶಿವರಾಜ್​ಕುಮಾರ್ ಹಾಗೂ ಅಪ್ಪು ಪತ್ನಿ ಅಶ್ವಿನಿ  ಅಭಿಮಾನಿಗಳಿಗೆ ಊಟ ಬಡಿಸಿ ತೆರಳಿದ್ದಾರೆ.

ಇದನ್ನೂ ಓದಿ: Puneeth Rajkumar: ಅರಮನೆ ಮೈದಾನದಲ್ಲಿ ನಟ ಶಿವರಾಜ್​ಕುಮಾರ್​ ರಕ್ತದಾನ

Published On - 2:31 pm, Tue, 9 November 21

Follow us
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು