ಇನ್ನೂ ನಿಂತಿಲ್ಲ ಶಿವಣ್ಣನ ಕಣ್ಣೀರು; ಅಪ್ಪು ನೆನೆದು ಬಿಕ್ಕಿ ಬಿಕ್ಕಿ ಅಳುತ್ತಿರುವ ಮುತ್ತಣ್ಣ
Shivarajkumar: ವೇದಿಕೆ ಕಾರ್ಯಕ್ರಮಗಳಲ್ಲಿ ಪುನೀತ್ ರಾಜ್ಕುಮಾರ್ ಬಗ್ಗೆ ಮಾತು ಬಂದರೆ ಸಾಕು ಶಿವರಾಜ್ಕುಮಾರ್ ಅವರ ಕಣ್ಣುಗಳು ತುಂಬಿ ಬರುತ್ತವೆ. ಮಕ್ಕಳಂತೆ ಅವರು ಬಿಕ್ಕಿ ಬಿಕ್ಕಿ ಅಳುತ್ತಾರೆ.
ಪುನೀತ್ ರಾಜ್ಕುಮಾರ್ (Puneeth Rajkumar) ಅವರ ನಿಧನದ ನೋವು ಎಂದಿಗೂ ಕಡಿಮೆ ಆಗುವಂಥದ್ದಲ್ಲ. ಅಭಿಮಾನಿಗಳಿಗೆ ಇಷ್ಟು ಸಂಕಟ ಆಗುತ್ತಿರುವಾಗ ಡಾ. ರಾಜ್ಕುಮಾರ್ ಕುಟುಂಬಕ್ಕೆ ಇನ್ನೆಷ್ಟು ಆಘಾತ ಆಗಿರಬಹುದು? ಶಿವರಾಜ್ಕುಮಾರ್ (Shivarajkumar) ಅವರಂತೂ ಸಹೋದರನ್ನು ಕಳೆದುಕೊಂಡು ಪ್ರತಿ ದಿನ ಕಣ್ಣೀರು ಹಾಕುತ್ತಿದ್ದಾರೆ. ಅವರ ಅಳು ಇನ್ನೂ ನಿಂತಿಲ್ಲ. ವೇದಿಕೆ ಕಾರ್ಯಕ್ರಮಗಳಲ್ಲಿ ಪುನೀತ್ ಬಗ್ಗೆ ಮಾತು ಬಂದರೆ ಸಾಕು ಶಿವಣ್ಣನ ಕಣ್ಣುಗಳು ತುಂಬಿ ಬರುತ್ತವೆ. ಶೇಷಾದ್ರಿಪುರದ ಕರ್ನಾಟಕ ಪ್ರದೇಶ ಆರ್ಯ ಈಡಿಗರ (Idiga Community) ಸಂಘದಲ್ಲಿ ಇಂದು (ಡಿ.5) ಪುನೀತ್ ಸ್ಮರಣಾಂಜಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ವೇಳೆ ಅಪ್ಪು ನೆನಪುಗಳನ್ನು ಮೆಲುಕು ಹಾಕಿದ ಶಿವರಾಜ್ಕುಮಾರ್ ಅವರು ಬಿಕ್ಕಿ ಬಿಕ್ಕಿ ಅತ್ತರು. ಪುನೀತ್ ಸಹೋದರಿ ಲಕ್ಷ್ಮೀ, ನಟಿ ಜಯಮಾಲಾ, ಈಡಿಗ ಸಮುದಾಯದ ಮುಖಂಡರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಇದನ್ನೂ ಓದಿ:
ಪುನೀತ್ ಕನಸಿನ ‘ಗಂಧದ ಗುಡಿ’ ಟೀಸರ್ ರಿಲೀಸ್ ಮಾಡುವ ವಿಶೇಷ ವ್ಯಕ್ತಿ ಯಾರು? ಆಹ್ವಾನ ನೀಡಿದ ಶಿವಣ್ಣ
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

