ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ

| Updated By: ಮದನ್​ ಕುಮಾರ್​

Updated on: Oct 04, 2024 | 9:38 PM

ಐತಿಹಾಸಿಕ ‘ಶ್ರೀರಂಗಪಟ್ಟಣ ದಸರಾ ಮಹೋತ್ಸವ’ ನಡೆಯುತ್ತಿದೆ. ಶ್ರೀರಂಗಪಟ್ಟಣದ ರಂಗನಾಥ ಮೈದಾನದಲ್ಲಿ ಅಪಾರ ಸಂಖ್ಯೆಯ ಜನರು ಪಾಲ್ಗೊಂಡಿದ್ದಾರೆ. ಈ ಸಮಾರಂಭಕ್ಕೆ ಶಿವರಾಜ್​ಕುಮಾರ್​ ಅವರು ಆಗಮಿಸಿದ್ದಾರೆ. ಕಾರ್ಯಕ್ರಮದ ವೇದಿಕೆಗೆ ಶಿವಣ್ಣ ಎಂಟ್ರಿ ನೀಡಿದಾಗ ಅಭಿಮಾನಿಗಳು ಜೈಕಾರ ಕೂಗಿದರು. ಈ ವೇಳೆ ಅವರಿಗೆ ಸನ್ಮಾನ ಮಾಡಲಾಯಿತು.

ಶ್ರೀರಂಗಪಟ್ಟಣ ದಸರಾ ಮಹೋತ್ಸವದಲ್ಲಿ ಶಿವರಾಜ್​​ಕುಮಾರ್​ ನಟನೆಯ ‘ಭೈರತಿ ರಣಗಲ್​’ ಸಿನಿಮಾದ ಟೀಸರ್ ಪ್ರದರ್ಶನ ಮಾಡಲಾಯಿತು. ಅಭಿಮಾನಿಗಳು ಖುಷಿಯಿಂದ ಕೇಕೆ ಹಾಕಿದರು. ‘ಈ ಕಾರ್ಯಕ್ರಮಕ್ಕೆ ಬಂದಿರೋದು ಬಹಳ ಖುಷಿ ಅನಿಸಿದೆ. ಶ್ರೀರಂಗಪಟ್ಟಣ, ಮೈಸೂರು ಸುತ್ತಮುತ್ತ ಶೂಟಿಂಗ್ ಮಾಡಿದ ಸಿನಿಮಾಗಳು ಹಿಟ್ ಆಗುತ್ತವೆ. ಈ ಸ್ಥಳದ ಮಹಿಮೆ ಹಾಗಿದೆ. ಹಬ್ಬ ಬಂದಾಗ ಎಲ್ಲರೂ ಭಾಗವಹಿಸಬೇಕು. ಕನ್ನಡಿಗರಿಗೆ ಅವಕಾಶ ಮಾಡಿಕೊಟ್ಟಿರುವುದು ಇನ್ನೂ ಖುಷಿಯಾಗಿದೆ’ ಎಂದು ಶಿವರಾಜ್​ಕುಮಾರ್​ ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us on