‘ಭಜರಂಗಿ 2’ ಸಿನಿಮಾ ನೋಡಿದ ನಂತರ ಮಹತ್ವದ ಘೋಷಣೆ ಮಾಡಿದ ಶಿವರಾಜ್ಕುಮಾರ್
ಹರ್ಷ ಹಾಗೂ ಶಿವರಾಜ್ಕುಮಾರ್ ಕಾಂಬಿನೇಷನ್ನಲ್ಲಿ ಮೂಡಿ ಬಂದ ಮೂರನೇ ಸಿನಿಮಾ ‘ಭಜರಂಗಿ 2’. ಈಗ ಇವರ ಕಾಂಬಿನೇಷನ್ನಲ್ಲಿ ನಾಲ್ಕನೇ ಸಿನಿಮಾ ಬರುತ್ತಿದೆ
ಪುನೀತ್ ರಾಜ್ಕುಮಾರ್ ಅವರನ್ನು ಕಳೆದುಕೊಂಡು ಶಿವರಾಜ್ಕುಮಾರ್ ಸೈಲೆಂಟ್ ಆಗಿದ್ದಾರೆ. ಈ ಸಾವು ಅವರಿಗೆ ತೀವ್ರ ನೋವನ್ನು ತಂದಿದೆ. ಇದನ್ನು ಅರಗಿಸಿಕೊಳ್ಳೋಕೆ ಯಾರಿಂದಲೂ ಸಾಧ್ಯವಾಗುತ್ತಿಲ್ಲ. ಈ ಕಾರಣಕ್ಕೆ ಅವರು ‘ಭಜರಂಗಿ 2’ ಸಿನಿಮಾ ನೋಡೋಕೆ ಸಾಧ್ಯವಾಗಿರಲಿಲ್ಲ. ಈಗ ಶಿವರಾಜ್ಕುಮಾರ್ ಬಿಡುವು ಮಾಡಿಕೊಂಡು ಸಿನಿಮಾ ವೀಕ್ಷಣೆ ಮಾಡಿದ್ದಾರೆ. ಇಂದು (ನವೆಂಬರ್ 14) ಅಭಿಮಾನಿಗಳ ಜತೆ ಕುಳಿತು ಶಿವರಾಜ್ಕುಮಾರ್ ಸಿನಿಮಾ ವೀಕ್ಷಣೆ ಮಾಡಿದ್ದಾರೆ. ಇದಾದ ನಂತರ ಅವರು ಸಾಕಷ್ಟು ವಿಚಾರ ಮಾತನಾಡಿದ್ದಾರೆ. ಹರ್ಷ ಹಾಗೂ ಶಿವರಾಜ್ಕುಮಾರ್ ಕಾಂಬಿನೇಷನ್ನಲ್ಲಿ ಮೂಡಿ ಬಂದ ಮೂರನೇ ಸಿನಿಮಾ ‘ಭಜರಂಗಿ 2’. ಈಗ ಇವರ ಕಾಂಬಿನೇಷನ್ನಲ್ಲಿ ನಾಲ್ಕನೇ ಸಿನಿಮಾ ಬರುತ್ತಿದೆ. ಇದು ವಿಳಂಬವಾಗಲಿದೆ ಎನ್ನಲಾಗಿತ್ತು. ಇದನ್ನು, ಶಿವಣ್ಣ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ‘ನನ್ನ 125 ಸಿನಿಮಾಗೆ ಹರ್ಷ ಅವರೇ ನಿರ್ದೇಶನ ಮಾಡಲಿದ್ದಾರೆ’ ಎಂದಿದ್ದಾರೆ ಶಿವರಾಜ್ಕುಮಾರ್.
ಇದನ್ನೂ ಓದಿ: ಚಿತ್ರಮಂದಿರದಲ್ಲಿ ಅಭಿಮಾನಿಗಳಿಗೆ ಅನ್ನಸಂತರ್ಪಣೆ ಮಾಡಿದ ಶಿವರಾಜ್ಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ

