ನಟ ಶಿವರಾಜ್ಕುಮಾರ್ (Shivarajkumar) ಅವರು ರಾಜ್ಯದ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದಾರೆ. ಮುಖ್ಯವಾಗಿ ಉತ್ತರ ಕರ್ನಾಟಕದ ಊರುಗಳಿಗೆ ಅವರು ತೆರಳಿ, ಅಲ್ಲಿನ ಜನರ ಜೊತೆ ಮಾತನಾಡುತ್ತಿದ್ದಾರೆ. ಅದಕ್ಕೆ ಕಾರಣ ಆಗಿರುವುದು ‘ಕರಟಕ ದಮನಕ’ ಸಿನಿಮಾ. ಯೋಗರಾಜ್ ಭಟ್ ನಿರ್ದೇಶನ ಮಾಡಿರುವ ಈ ಸಿನಿಮಾದಲ್ಲಿ ಉತ್ತರ ಕರ್ನಾಟಕದ ಕಥೆ ಇದೆ. ಹಾಗಾಗಿ ಅಲ್ಲಿನ ಜಿಲ್ಲೆಗಳಿಗೆ ಹೋಗಿ ಶಿವರಾಜ್ಕುಮಾರ್ ಅವರು ಪ್ರಚಾರ ಮಾಡುತ್ತಿದ್ದಾರೆ. ಮಾರ್ಚ್ 8ರಂದು ‘ಕರಟಕ ದಮನಕ’ (Karataka Damanaka) ಬಿಡುಗಡೆ ಆಯಿತು. ಈಗ ಶಿವರಾಜ್ಕುಮಾರ್ ಅವರು ವಿಜಯ ಯಾತ್ರೆ ಮಾಡುತ್ತಿದ್ದಾರೆ. ಈ ಸಿನಿಮಾದ ‘ಹಿತಲಕ ಕರಿಬ್ಯಾಡ ಮಾವ..’ ಹಾಡನ್ನು ಉತ್ತರ ಕರ್ನಾಟಕದ ಗಾಯಕ ಮಾಳು ನಿಪನಾಳ ಅವರು ಹಾಡಿದ್ದಾರೆ. ಈ ಗೀತೆಯಲ್ಲಿ ಪ್ರಭುದೇವ ಮತ್ತು ನಿಶ್ವಿಕಾ ನಾಯ್ಡು ಡ್ಯಾನ್ಸ್ ಮಾಡಿದ್ದಾರೆ. ಜನರಿಗೆ ಈ ಸಾಂಗ್ ಇಷ್ಟ ಆಗಿದೆ. ಬೆಳಗಾವಿಯಲ್ಲಿ ಅಭಿಮಾನಿಗಳ ಎದುರು ಮಾತನಾಡಿದ ಶಿವರಾಜ್ಕುಮಾರ್ ಅವರು ಮಾಳು ನಿಪನಾಳ (Malu Nipanal) ಅವರ ಗಾಯನಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಈ ಮೊದಲು ‘ನಾ ಡ್ರೈವರಾ..’ ಹಾಡಿನ ಮೂಲಕ ಫೇಮಸ್ ಆಗಿದ್ದ ಮಾಳು ನಿಪನಾಳ ಅವರಿಗೆ ಈಗ ಸಿನಿಮಾಗಳಲ್ಲಿ ಹಾಡುವ ಅವಕಾಶ ಸಿಗುತ್ತಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.