‘ಗೀತಾ ಅವರು ತಾಯಿ ಸ್ಥಾನದಲ್ಲಿ ಇದ್ದಾರೆ’; ಮೈಸೂರಿನ ಶಕ್ತಿಧಾಮದ ಬಗ್ಗೆ ಶಿವರಾಜ್ಕುಮಾರ್ ಮಾತು
‘ಶಕ್ತಿಧಾಮದಿಂದಾಗಿ ಮೈಸೂರಿನ ಜೊತೆಗಿನ ನಮ್ಮ ಬಾಂಧವ್ಯ ಜಾಸ್ತಿ ಆಗುತ್ತಿದೆ. ಅದು ಎಂದಿಗೂ ಕಡಿಮೆ ಆಗುವುದಿಲ್ಲ’ ಎಂದು ಶಿವರಾಜ್ಕುಮಾರ್ ಹೇಳಿದ್ದಾರೆ.
ನಟ ಶಿವರಾಜ್ಕುಮಾರ್ (Shivarajkumar) ಅವರಿಗೆ ಮೈಸೂರಿನ ಜೊತೆ ನಂಟಿದೆ. ಆಗಾಗ ಅವರು ಮೈಸೂರಿಗೆ ಬಂದು ಹೋಗುತ್ತಾರೆ. ಮೈಸೂರಿನಲ್ಲಿರುವ ಶಕ್ತಿಧಾಮ ಆಶ್ರಮದ ಜವಾಬ್ದಾರಿಯನ್ನು ಗೀತಾ ಶಿವರಾಜ್ಕುಮಾರ್ (Geetha Shivarajkumar) ಅವರಿಗೆ ನೀಡಲಾಗಿದೆ. ಶಕ್ತಿಧಾಮದ (Shakthidhama) ಕೆಲಸಗಳ ಸಲುವಾಗಿ ಡಾ. ರಾಜ್ಕುಮಾರ್ ಕುಟುಂಬದವರು ಆಗಾಗ ಮೈಸೂರಿಗೆ ಭೇಟಿ ನೀಡುತ್ತಲೇ ಇರುತ್ತಾರೆ. ಈ ಕುರಿತು ಶಿವರಾಜ್ಕುಮಾರ್ ಅವರು ಮಾತನಾಡಿದ್ದಾರೆ. ‘ನಮಗೆ ಮೈಸೂರು ಹೊಸದಲ್ಲ. ಗೀತಾ ಅವರು ಶಕ್ತಿಧಾಮದಲ್ಲಿ ತಾಯಿಯ ಸ್ಥಾನದಲ್ಲಿ ಕೂತಿದ್ದಾರೆ. ಅವರಿಗೆ ಜವಾಬ್ದಾರಿ ಜಾಸ್ತಿ ಇದೆ. ಹಾಗಾಗಿ ಅವರು ಆಗಾಗ ಬೆಂಗಳೂರಿನಿಂದ ಮೈಸೂರಿಗೆ ಬರಬೇಕಾಗುತ್ತದೆ. ಮೀಟಿಂಗ್ಗಳು ಇರುತ್ತವೆ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಕಾಳಜಿ ವಹಿಸಬೇಕು. ಮಕ್ಕಳಿಗೆ ಗೀತಾ ಅವರೇ ಪಾಠ ಮಾಡುತ್ತಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ಮೈಸೂರಿನ ಜೊತೆಗಿನ ನಮ್ಮ ಬಾಂಧವ್ಯ ಜಾಸ್ತಿ ಆಗುತ್ತಿದೆ. ಅದು ಎಂದಿಗೂ ಕಡಿಮೆ ಆಗುವುದಿಲ್ಲ’ ಎಂದು ಶಿವರಾಜ್ಕುಮಾರ್ ಹೇಳಿದ್ದಾರೆ. ಜ.26ರಂದು ಶಕ್ತಿಧಾಮದ ಮಕ್ಕಳ ಜೊತೆಗೆ ಶಿವಣ್ಣ ಮತ್ತು ಗೀತಾ ಅವರು ಗಣರಾಜ್ಯೋತ್ಸವ ಆಚರಿಸಿದ್ದರು. ಧ್ವಜಾರೋಹಣದ ಬಳಿಕ ಆಶ್ರಮದ ಮಕ್ಕಳಿಗೆ ಸಿಹಿ ಹಂಚಿದ್ದರು. ಮಕ್ಕಳ ಜೊತೆ ಶಿವಣ್ಣ ಜಾಲಿ ರೈಡ್ ತೆರಳಿದ್ದ ವಿಡಿಯೋ ಕೂಡ ವೈರಲ್ ಆಗಿತ್ತು.
ಇದನ್ನೂ ಓದಿ:
ಅಭಿಮಾನಿಗಳಿಗೆ ಕೈ ತುತ್ತು ತಿನ್ನಿಸಿದ ಶಿವಣ್ಣ; ದೊಡ್ಮನೆ ಸರಳತೆಗೆ ಈ ವಿಡಿಯೋ ಸಾಕ್ಷಿ
ಭೂಗತ ಲೋಕದ ಕಥೆಯಲ್ಲಿ ಶಿವರಾಜ್ಕುಮಾರ್; ‘ಓಂ’ ರೀತಿಯಲ್ಲಿ ಹೊಸ ಸಿನಿಮಾ

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ

ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ

ಪಹಲ್ಗಾಮ್: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ

ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
