K Shivaram No More: ಸಮಾಜದ ಕಟ್ಟಕಡೆಯ ವ್ಯಕ್ತಿ ಸಹ ಉನ್ನತ ಸ್ಥಾನ ತಲುಪಬೇಕೆಂದು ಶಿವರಾಮು ಹೇಳುತ್ತಿದ್ದರು: ಸಿದ್ಧರಾಜು, ನಿವೃತ್ತ ಐಪಿಎಸ್ ಅಧಿಕಾರಿ

ಅರುಣ್​ ಕುಮಾರ್​ ಬೆಳ್ಳಿ

Updated on: Feb 29, 2024 | 7:55 PM

K Shivaram No More: ಮಹತ್ವಾಕಾಂಕ್ಷೆಯ ವ್ಯಕ್ತಿಯಾಗಿದ್ದ ಶಿವರಾಮ್ ಒಬ್ಬ ಹೋರಾಟಗಾರರಾಗಿದ್ದರು ಮತ್ತು ಅತೀವ ಜನಪರ ಕಾಳಜಿ ಹೊಂದಿದ್ದರು. ಕಡುಬಡತನದಲ್ಲಿ ಹುಟ್ಟಿದ್ದರೂ ಬಾಲ್ಯದಿಂದಲೇ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಆದರ್ಶಗಳನ್ನು ರೂಢಿಸಿಕೊಂಡು ಉತ್ತುಂಗಕ್ಕೇರಿದರು ಎಂದು ಸಿದ್ಧರಾಜು ಹೇಳಿದರು.

ಬೆಂಗಳೂರು: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಮತ್ತು ಕನ್ನಡದಲ್ಲಿ ಐಎಎಸ್ (IAS) ಬರೆದು ಪಾಸಾದ ನಾಡಿನ ಮೊದಲ ಹೆಮ್ಮೆಯ ಕುವರ ಕೆ ಶಿವರಾಮ್ (K Shivaram) ಕೊನೆಯುಸಿರೆಳೆದಿದ್ದಾರೆ. ದಕ್ಷ ಆಡಳಿತಾಧಿಕಾರಿಯಾಗಿ ಹೆಸರು ಮಾಡಿದ್ದ ಶಿವರಾಮು ಸ್ಯಾಂಡಲ್ ವುಡ್ ನಟ (actor) ಕೂಡ ಆಗಿದ್ದರು ಹಾಗೂ ನಿವೃತ್ತಿಯ ಬಳಿಕ ರಾಜಕೀಯಕ್ಕಿಳಿದು ಜನಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಅವರ ನಿಧನ ಕೇವಲ ಸಂಬಂಧಿಕರಿಗೆ ಮತ್ತು ಅಭಿಮಾನಿಗಳಿಗೆ ಮಾತ್ರವಲ್ಲ, ಅವರನ್ನು ಬಲ್ಲ ಅನೇಕರಿಗೆ ಆಘಾತಕಾರಿ ಸಂಗತಿಯಾಗಿದೆ ಎಂದು ಅವರ ಒಡನಾಡಿ ಮತ್ತು ನಿವೃತ್ತ ಐಪಿಎಸ್ ಅಧಿಕಾರಿ ಸಿದ್ಧರಾಜು ಭಾವುಕರಾಗಿ ಹೇಳುತ್ತಾರೆ. ಮಹತ್ವಾಕಾಂಕ್ಷೆಯ ವ್ಯಕ್ತಿಯಾಗಿದ್ದ ಶಿವರಾಮ್ ಒಬ್ಬ ಹೋರಾಟಗಾರರಾಗಿದ್ದರು ಮತ್ತು ಅತೀವ ಜನಪರ ಕಾಳಜಿ ಹೊಂದಿದ್ದರು. ಕಡುಬಡತನದಲ್ಲಿ ಹುಟ್ಟಿದ್ದರೂ ಬಾಲ್ಯದಿಂದಲೇ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಆದರ್ಶಗಳನ್ನು ರೂಢಿಸಿಕೊಂಡು ಉತ್ತುಂಗಕ್ಕೇರಿದರು ಎಂದು ಸಿದ್ಧರಾಜು ಹೇಳಿದರು.

ಶಿವರಾಮ್ ಅವರ ಪತ್ನಿ ತನ್ನ ಸಹಪಾಠಿ ಆಗಿದ್ದರೆಂದ ಅವರು, ಮೃತ ಸ್ನೇಹಿತನಿಗೆ ರಾಜಕೀಯದ ಮೂಲಕ ಜನರ ಸೇವೆ ಮಾಡುವ ಉತ್ಕಟ ಆಸೆ ಇತ್ತು ಎಂದರು. ಕಳೆದ ಲೋಕ ಸಭಾ ಚುನಾವಣೆಯಲ್ಲಿ ಅವರು ಗೆಲ್ಲಲಿಲ್ಲವಾದರೂ ಲಕ್ಷಾಂತರ ಜನ ಅವರಿಗೆ ಮತ ನೀಡಿ ತಮ್ಮ ಪ್ರೀತಿ ವಿಶ್ವಾಸ ಪ್ರದರ್ಶಿಸಿದ್ದರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರದಿದ ಸ್ಪರ್ಧಿಸುವ ಬಯಕೆ ಹೊಂದಿದ್ದರು ಮತ್ತು ಅದಕ್ಕಾಗಿ ಸಾಕಷ್ಟು ಓಡಾಟ ಕೂಡ ನಡೆಸಿದ್ದರು ಎಂದು ಸಿದ್ಧರಾಜು ಹೇಳಿದರು. ಸಮಾಜದ ಕಟ್ಟಕಡೆಯ ವ್ಯಕ್ತಿ ಸಹ ಬದುಕಿನಲ್ಲಿ ಉನ್ನತ ಹಂತ ತಲುಪಬೇಕೆಂಬ ತುಡಿತ ಹೊಂದಿದ್ದ ಅವರ ಸಾವು ತಮಗೆಲ್ಲ ಬಹಳ ಆಘಾತವನ್ನುಂಟು ಮಾಡಿದೆ ಎಂದು ಸಿದ್ಧರಾಜು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  K Shivaram Passes Away: ನಟ, ರಾಜಕಾರಣಿ ಕೆ. ಶಿವರಾಮ್ ನಿಧನ; ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಹೀರೋ 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.