AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುಗರ್ ಬೋಲ್ ಮಂಡ್ಯದಲ್ಲಿಂದು ಶೋಭಾಯಾತ್ರೆ, ನಗರವೆಲ್ಲ ಕೇಸರಿಮಯ, ಬಿಗಿ ಪೊಲೀಸ್ ಬಂದೋಬಸ್ತ್

ಶುಗರ್ ಬೋಲ್ ಮಂಡ್ಯದಲ್ಲಿಂದು ಶೋಭಾಯಾತ್ರೆ, ನಗರವೆಲ್ಲ ಕೇಸರಿಮಯ, ಬಿಗಿ ಪೊಲೀಸ್ ಬಂದೋಬಸ್ತ್

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Apr 12, 2025 | 12:18 PM

Share

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದೂಗಳು ನಿಶ್ಶಕ್ತರು ಎಂದು ಬಿಂಬಿಸುವ ಪ್ರಯತ್ನ ನಡೆಸಿದೆ, ಹಿಂದೂ ಧಾರ್ಮಿಕ ಆಚರಣೆಗಳ ಸಂದರ್ಭಗಳಲ್ಲಿ ಕಿಡಿಗೇಡಿಗಳಿಂದ ಅಡ್ಡಿಯನ್ನುಂಟು ಮಾಡುವ ಕೆಲಸ ನಡೆಯುತ್ತಿದೆ, ಹಿಂದೂಗಳು ದುರ್ಬಲರಲ್ಲ ಎಂಬ ಸಂಗತಿಯನ್ನು ಸಹ ಶೋಭಾಯಾತ್ರೆಯ ಮೂಲಕ ಸಾರುವ ನಿಶ್ಚಯವನ್ನು ಸಂಘಟಕರು ಮಾಡಿಕೊಂಡಿದ್ದಾರೆ.

ಮಂಡ್ಯ, ಏಪ್ರಿಲ್ 12: ನಗರದಲ್ಲಿ ಹನುಮ ಜಯಂತಿ ಅಂಗವಾಗಿ ಇಂದು ಸಕ್ಕರೆನಗರಿ ಮಂಡ್ಯದಲ್ಲಿ ಶೋಭಾಯಾತ್ರೆಯನ್ನು ಆಯೋಜಿಸಲಾಗಿದ್ದು ನಗರವೆಲ್ಲ ಕೇಸರಿಮಯವಾಗಿದೆ. ಈಗಾಗಲೇ ವರದಿಯಾಗಿರುವಂತೆ ಶ್ರೀರಾಮಾಂಜನೇಯ ಮಹೋತ್ಸವ ಸಮಿತಿ, ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ, ದುರ್ಗಾವಾಹಿನಿ ಸಂಘಟನೆಗಳು ಶೋಭಾಯಾತ್ರೆಯನ್ನು ಆಯೋಜಿಸಿವೆ. ಯಾತ್ರೆಯ ವೇಳೆ ಯಾವುದೇ ಅಹಿತಕರ ಘಟನೆ ಜರುಗದಂತೆ ಅದು ಸಾಗುವ ಮಾರ್ಗದಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮಂಡ್ಯದ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ನೀಡಿರುವ ಮಾಹಿತಿ ಪ್ರಕಾರ ಸುಮಾರು 700ಕ್ಕೂ ಹೆಚ್ಚು ಪೊಲೀಸರನ್ನು ಬಂದೋಬಸ್ತ್​ಗಾಗಿ ನಿಯೋಜಿಸಲಾಗಿದೆ.

ಇದನ್ನೂ ಓದಿ:  ಮಂಡ್ಯದಲ್ಲಿ ಮತ್ತೆ ಹನುಮ ಧ್ವಜ ದಂಗಲ್‌ ಮುನ್ನೆಲೆಗೆ: ಮತ್ತೊಂದು ಹೋರಾಟಕ್ಕೆ ಮುಂದಾದ ಹಿಂದೂ ಸಂಘಟನೆಗಳು

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.