ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ: ಮಹಿಳೆಯನ್ನು ಬಲವಂತವಾಗಿ ತಬ್ಬಿ ಚುಂಬಿಸಿದ ದುಷ್ಕರ್ಮಿ

Edited By:

Updated on: Aug 15, 2024 | 4:07 PM

ರಾಜ್ಯ ರಾಜಧಾನಿ ಬೆಂಗಳೂರಿನ ಮಹಿಳೆಯರು ಒಂಟಿಯಾಗಿ ಮನೆಯಿಂದ ಹೊರ ಬರುವಂತೆ ಇಲ್ಲವಾ? ಎಂಬ ಪ್ರಶ್ನೆ ಮೂಡಿದೆ. ಹೌದು, ಬೆಳಗ್ಗೆ 5 ಘಂಟೆ ಸಮಯದಲ್ಲಿ ನಡೆದ ಒಂದು ಘಟನೆ ನಿಜಕ್ಕೂ ಭಯ ಹುಟ್ಟಿಸುತ್ತಿದೆ. ವಾಕಿಂಗ್ ಎಂದು ರಸ್ತೆ ಬದಿ ನಿಂತಿದ್ದ ಮಹಿಳೆಯನ್ನ ವಿಕೃತ ಕಾಮಿಯೊಬ್ಬ ಬಲವಂತವಾಗಿ ತಬ್ಬಿ ಹಿಡಿದು ಚುಂಬಿಸಿದ್ದಾನೆ.

ಬೆಂಗಳೂರು, ಆ.04: ಸಿಲಿಕಾನ್​ ಸಿಟಿ ಬೆಂಗಳೂರಿನ ಮಹಿಳೆಯರು ಒಂಟಿಯಾಗಿ ಮನೆಯಿಂದ ಹೊರ ಬರುವಂತೆ ಇಲ್ಲವಾ? ಎಂಬ ಪ್ರಶ್ನೆ ಮೂಡಿದೆ. ಹೌದು, ಬೆಳಗ್ಗೆ 5 ಘಂಟೆ ಸಮಯದಲ್ಲಿ ನಡೆದ ಒಂದು ಘಟನೆ ನಿಜಕ್ಕೂ ಭಯ ಹುಟ್ಟಿಸುತ್ತಿದೆ. ವಾಕಿಂಗ್ ಎಂದು ರಸ್ತೆ ಬದಿ ನಿಂತಿದ್ದ ಮಹಿಳೆಯನ್ನ ವಿಕೃತ ಕಾಮಿಯೊಬ್ಬ ಬಲವಂತವಾಗಿ ತಬ್ಬಿ ಹಿಡಿದು ಚುಂಬಿಸಿದ್ದಾನೆ. ನಂತರ ಆಕೆ ತಪ್ಪಿಸಿಕೊಂಡು ಬಂದರೂ ಸಹ ಹಿಂದೆ ಬಂದು ಹಿಂಸೆ ನೀಡಿದ್ದಾನೆ. ಈ ಘಟನೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆಗಸ್ಟ್ 02ರ ಬೆಳಗಿನ ಜಾವ ಐದು ಘಂಟೆಗೆ ಕೋಣನಕುಂಟೆ ಬಳಿಯ ಕೃಷ್ಣಾನಗರದಲ್ಲಿ ನಡೆದಿದೆ. ಘಟನೆ ಬಳಿಕ ಸ್ಥಳಕ್ಕೆ ಕೋಣನಕುಂಟೆ ಪೊಲೀಸರು ಭೇಟಿ ನೀಡಿದ್ದಾರೆ. ಆದರೆ, ಪೊಲೀಸರು ಸರಿಯಾದ ರೀತಿ ಕ್ರಮ ತೆಗೆದುಕೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ವಾಕಿಂಗ್​ಗೆ ಬಂದಿದ್ದ ಮಹಿಳೆಯನ್ನು ತಬ್ಬಿಕೊಂಡು ಚುಂಬಿಸಿ ಪರಾರಿಯಾಗಿದ್ದ ಕಾಮುಕ ಅರೆಸ್ಟ್

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Aug 04, 2024 10:20 PM
Follow Us
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More