ಹಾಸನದಲ್ಲೊಂದು ಆಘಾತಕಾರಿ ಘಟನೆ: ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆಗೆ ಬಂದ ಆಗಂತುಕ

Updated on: Jan 20, 2026 | 3:59 PM

ಹಾಸನ ನಗರದಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ಅಪರಿಚಿತ ವ್ಯಕ್ತಿಯೋರ್ವ ಶಾಲಾ ಬಾಲಕಿ ಹಿಂಬಾಲಿಸಿ ಆಕೆಯ ಮನೆ ಬಾಗಿಲುವರೆಗೂ ಬಂದಿದ್ದು, ಆತಂಕ ಸೃಷ್ಟಿಸಿದೆ. ತನ್ನನ್ನ ಯಾರೋ ಹಿಂಬಾಲಿಸುತ್ತಿದ್ದಾರೆಂದು ತಿಳಿದು ಬಾಲಕಿ ಮನೆ ಕಡೆಗೆ ಓಡೋಡಿ ಬಂದಿದ್ದು, ಗೇಟು ಹಾಕಿಕೊಂಡು ಅಮ್ಮ ಅಮ್ಮ ಬಾಗಿಲು ತೆಗಿ ಎಂದು ಆತಂಕದಿಂದ ಕಿರಿಚಿದ್ದಾಳೆ. ಇನ್ನೊಂದೆಡೆ ಆಗಂತುಕ ಸಹ ಬಾಲಕಿಯನ್ನ ಬೆನ್ನಟ್ಟಿ ಮನೆ ಗೇಟ್ ವರೆಗೂ ಬಂದಿದ್ದಾನೆ. ಈ ಬೆಚ್ಚಿಬೀಳಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದನ್ನು ನೋಡಿದರೆ ಬೆಚ್ಚಿಬೀಳಿಸುವಂತಿದೆ.

ಹಾಸನ, (ಜನವರಿ 20): ಹಾಸನ (Hassan) ನಗರದಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ಅಪರಿಚಿತ ವ್ಯಕ್ತಿಯೋರ್ವ ಶಾಲಾ ಬಾಲಕಿ ಹಿಂಬಾಲಿಸಿ ಆಕೆಯ ಮನೆ ಬಾಗಿಲುವರೆಗೂ ಬಂದಿದ್ದು, ಆತಂಕ ಸೃಷ್ಟಿಸಿದೆ. ತನ್ನನ್ನ ಯಾರೋ ಹಿಂಬಾಲಿಸುತ್ತಿದ್ದಾರೆಂದು ತಿಳಿದು ಬಾಲಕಿ ಮನೆ ಕಡೆಗೆ ಓಡೋಡಿ ಬಂದಿದ್ದು, ಗೇಟು ಹಾಕಿಕೊಂಡು ಅಮ್ಮ ಅಮ್ಮ ಬಾಗಿಲು ತೆಗಿ ಎಂದು ಆತಂಕದಿಂದ ಕಿರಿಚಿದ್ದಾಳೆ. ಇನ್ನೊಂದೆಡೆ ಆಗಂತುಕ ಸಹ ಬಾಲಕಿಯನ್ನ ಬೆನ್ನಟ್ಟಿ ಮನೆ ಗೇಟ್ ವರೆಗೂ ಬಂದಿದ್ದಾನೆ. ಈ ಬೆಚ್ಚಿಬೀಳಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದನ್ನು ನೋಡಿದರೆ ಬೆಚ್ಚಿಬೀಳಿಸುವಂತಿದೆ. ಜನವರಿ 17ರ ಶನಿವಾರ ಮಧ್ಯಾಹ್ನ ಹಾಸನದ ಪೆನ್ಷನ್ ಮೊಹಲ್ಲಾ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆಗಂತುಕನಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More