Shocking Video: ಬೈಕ್​ನಲ್ಲಿ ಹೋಗುತ್ತಿದ್ದ ಯುವತಿಗೆ ರಸ್ತೆಯಲ್ಲಿ ನಿಂತ ಮಳೆನೀರು ಎರಚಿ ಪುರುಷರಿಂದ ಕಿರುಕುಳ; ವಿಡಿಯೋ ವೈರಲ್

ಲಕ್ನೋದ ಸೇತುವೆಯ ಕೆಳಗೆ ನಿಂತಿದ್ದ ಮಳೆನೀರಿನಲ್ಲಿ ಆಟವಾಡುತ್ತಿದ್ದ ಪುರುಷರು ಬೈಕ್​ನಲ್ಲಿ ಹಿಂದೆ ಕುಳಿತಿದ್ದ ಯುವತಿಗೆ ರಸ್ತೆಯಲ್ಲಿ ನಿಂತ ಮಳೆನೀರು ಎರಚಿ ಕಿರುಕುಳ ನೀಡಿದ್ದಾರೆ. ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ಹಗಲು ಹೊತ್ತಿನಲ್ಲಿಯೇ ಮಹಿಳೆಯೊಬ್ಬರಿಗೆ ಈ ರೀತಿ ನಡುರಸ್ತೆಯಲ್ಲಿ ಕಿರುಕುಳ ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

Shocking Video: ಬೈಕ್​ನಲ್ಲಿ ಹೋಗುತ್ತಿದ್ದ ಯುವತಿಗೆ ರಸ್ತೆಯಲ್ಲಿ ನಿಂತ ಮಳೆನೀರು ಎರಚಿ ಪುರುಷರಿಂದ ಕಿರುಕುಳ; ವಿಡಿಯೋ ವೈರಲ್
|

Updated on: Jul 31, 2024 | 7:05 PM

ಉತ್ತರ ಪ್ರದೇಶದ ಲಕ್ನೋದ ತಾಜ್ ಹೋಟೆಲ್ ಸೇತುವೆಯ ಕೆಳಗೆ ಮೊಣಕಾಲು ಆಳದ ನೀರಿನಲ್ಲಿ ಮಳೆಯ ನೀರಿನಲ್ಲಿ ಎಂಜಾಯ್ ಮಾಡುತ್ತಿದ್ದ ಪುರುಷರ ಗುಂಪೊಂದು ಅದೇ ಮಾರ್ಗದಲ್ಲಿ ಬಂದ ಬೈಕ್​ನಲ್ಲಿ ಕುಳಿತಿದ್ದ ಪುರುಷ ಮತ್ತು ಯುವತಿಗೆ ಆ ಮಳೆನೀರನ್ನು ಎರಚಿ ಕಿರುಕುಳ ನೀಡಿದ್ದಾರೆ. ಆ ಇಬ್ಬರ ಮೈ ಪೂರ್ತಿ ಒದ್ದೆಯಾಗಿ ಅವರು ತಮ್ಮನ್ನು ಬಿಡುವಂತೆ ಮನವಿ ಮಾಡಿದರೂ ಬಿಡದೆ ಕಿಚಾಯಿಸಿದ್ದಾರೆ. ಇನ್ನೂ ವಿಪರ್ಯಾಸವೆಂದರೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರ ಮನೆಯ ಸಮೀಪದಲ್ಲೇ ಈ ಘಟನೆ ನಡೆದಿದೆ.

ಬೈಕ್​ನಲ್ಲಿ ಬಂದ ಇಬ್ಬರ ಮೇಲೆ ಮಳೆ ನೀರು ಎರಚಿದ ಪುರುಷರು ಆ ಬೈಕ್ ಅನ್ನು ಹಿಂಬದಿಯಿಂದ ಎಳೆಯಲು ಆರಂಭಿಸಿದರು. ಇದರಿಂದ ಆ ವ್ಯಕ್ತಿ ಬೈಕ್ ನಿಲ್ಲಿಸಿ ಕೀ ತೆಗೆಯುತ್ತಿದ್ದಂತೆ ಬ್ಯಾಲೆನ್ಸ್ ತಪ್ಪಿ ಹಿಂದೆ ಕುಳಿತಿದ್ದ ಯುವತಿ ನೀರಿಗೆ ಬಿದ್ದಿದ್ದಾಳೆ. ಈ ವಿಡಿಯೋಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us