ಮುಖ್ಯಮಂತ್ರಿಗಳ ಪುತ್ರ ಯತೀಂದ್ರ ಹಸ್ತಕ್ಷೇಪದ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಪೊಲೀಸ್ ಠಾಣೆ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್, ಸಚಿವ ಪರಮೇಶ್ವರ್ ಎದುರೇ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಆ ಮೂಲಕ ಜಾರ್ಜ್ ನಂತರ ಯತೀಂದ್ರ ಹಸ್ತಕ್ಷೇಪದ ಬಗ್ಗೆ ಮತ್ತೊಬ್ಬ ನಾಯಕ ಧ್ವನಿ ಎತ್ತಿದಂತಾಗಿದೆ.