ಮಹಾಶಿವರಾತ್ರಿ ಪ್ರಯುಕ್ತ ಧರ್ಮಸ್ಥಳಕ್ಕೆ ರಾಜ್ಯದ ನಾನಾ ಭಾಗಗಳಿಂದ ಸಾವಿರಾರು ಭಕ್ತರು ಪಾದಯಾತ್ರೆ ಕೈಗೊಂಡಿದ್ದಾರೆ. ಚಿಕ್ಕಮಗಳೂರಿನ ಚಾರ್ಮಾಡಿ ಘಾಟಿ ಮೂಲಕ ಸಾಗಿದ ಭಕ್ತರು, ಕೊಟ್ಟಿಗೆಹಾರ ಬಸ್ ನಿಲ್ದಾಣದಲ್ಲಿ ಕೊರೆಯುವ ಚಳಿಯ ನಡುವೆಯೂ ರಾತ್ರಿ ವಾಸ್ತವ್ಯ ಹೂಡಿದ್ದಾರೆ. ಧರ್ಮಸ್ಥಳಕ್ಕೆ ನಡೆದುಕೊಂಡು ಹೋಗುವ ಭಕ್ತರ ಈ ಭಕ್ತಿ ಯಾತ್ರೆ, ಅವರ ಅಚಲ ನಂಬಿಕೆ ಮತ್ತು ಸಂಕಲ್ಪವನ್ನು ಬಿಂಬಿಸುತ್ತದೆ.