ಜಪಾನ್ ಪ್ರಧಾನಿ ಸನಾಯೆ ತಕೈಚಿ ಅವರು ಭಾರತಕ್ಕೆ ನೀಡಿದ ತಮ್ಮ ಅಧಿಕೃತ ಭೇಟಿಯ ವೇಳೆ ಭಾರತೀಯ ಸಂಗೀತ ವಾದ್ಯ 'ಸಂತೂರ್' ಅನ್ನು ನುಡಿಸಿ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿದರು. ಉಭಯ ದೇಶಗಳ ನಡುವಿನ ಸ್ನೇಹದ ಬಾಂಧವ್ಯವನ್ನು ಇನ್ನಷ್ಟು ಗಟ್ಟಿಗೊಳಿಸಿತು. ಈ ಪ್ರದರ್ಶನವು ಬೆಳೆಯುತ್ತಿರುವ ಭಾರತ-ಜಪಾನ್ ಪಾಲುದಾರಿಕೆಯನ್ನು ಎತ್ತಿ ತೋರಿಸಿತು. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ 16ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಜಪಾನ್ ಪ್ರಧಾನಿ ತಕೈಚಿ ಭಾರತಕ್ಕೆ ಭೇಟಿ ನೀಡಿದ್ದಾರೆ.