ಸಚಿವ ಬಸವರಾಜ್ ರಾಯರೆಡ್ಡಿ ಅವರು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚೇತನಾ ಅವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಬರ ನಿರ್ವಹಣೆ, ಪರ್ಯಾಯ ಬೆಳೆಗಳು ಮತ್ತು ಆರ್ಥಿಕ ಅಂದಾಜುಗಳ ಕುರಿತು ನಡೆದ ಚರ್ಚೆಯ ಸಂದರ್ಭದಲ್ಲಿ ಸಚಿವರು ಅಧಿಕಾರಿಗಳ ಕಾರ್ಯವೈಖರಿ ಕುರಿತು ಪ್ರಶ್ನಿಸಿದರು. ಇದರಿಂದ ಅಧಿಕಾರಿಯೊಬ್ಬರು ಸಭೆಯಲ್ಲಿ ಕಣ್ಣೀರಿಟ್ಟ ಘಟನೆ ನಡೆಯಿತು.