ರಾಜ್ಯ ಕಾಂಗ್ರೆಸ್ ಪಕ್ಷದ ವತಿಯಿಂದ ಜನವರಿ 23 ರಂದು ನರೇಗಾ ಬಚಾವ್ ಆಂದೋಲನ ಬೃಹತ್ ಕಾರ್ಯಕ್ರಮವನ್ನು ಚಿಕ್ಕಬಳ್ಳಾಪುರದಲ್ಲಿ ಆಯೋಜಿಸಲಾಗಿದೆ. ಚಿಕ್ಕಬಳ್ಳಾಪುರ ನಗರ ಹೊರವಲಯದ ಬೈಪಾಸ್ ರಸ್ತೆ ಬಳಿ ಇರುವ ತ್ರಿಬಲ್ ಆರ್ ಗ್ರೌಂಡ್ ನಲ್ಲಿ ಕಾರ್ಯಕ್ರಮಕ್ಕೆ ಭರ್ಜರಿ ತಯಾರಿ ನಡೆಸಲಾಗುತ್ತಿದ್ದು, ವೇದಿಕೆ ನಿರ್ಮಾಣ ಕಾರ್ಯ ಜೋರಾಗಿ ಸಾಗಿದೆ. ಈ ವೇಳೆ ಬೃಹತ್ ಗಾತ್ರದ ನಾಗರಹಾವು ಪ್ರತ್ಯಕ್ಷವಾಗಿ ಎಲ್ಲರನ್ನ ಬೆಚ್ಚಿಬೀಳಿಸಿದೆ.