ತಮಿಳುನಾಡು ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ನಟ, ರಾಜಕಾರಣಿ ವಿಜಯ್ ಅವರು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ದೆಹಲಿಯಲ್ಲಿರುವ ತಮಿಳುನಾಡು ಭವನಕ್ಕೆ ತೆರಳಿದ ಸಿಎಂ ವಿಜಯ್, ನಂತರ ಪ್ರಧಾನಿ ಮೋದಿ ಕಚೇರಿಯಲ್ಲಿ ಒನ್-ಟು-ಒನ್ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಸಿಎಂ ವಿಜಯ್ ಅವರಿಗೆ ಹೂಗುಚ್ಛ ನೀಡಿ ಶುಭ ಹಾರೈಸಿದ್ದಾರೆ.