ವಿಜಯನಗರದ ಹೊಸಪೇಟೆ ತಾಲೂಕಿನ ಕೊಂಡನಾಯಕನಹಳ್ಳಿಯ ವಿಜಯಶ್ರೀ ರೆಸಾರ್ಟ್ ಬಳಿ ತಡರಾತ್ರಿ ಕರಡಿ ಪ್ರತ್ಯಕ್ಷವಾಗಿದೆ. ಸೌಜನ್ಯ ಲೇಔಟ್ನಲ್ಲಿ ಕರಡಿ ಓಡಾಟದ ದೃಶ್ಯ ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದೆ. ನಿವಾಸಿಗಳು ಆತಂಕಗೊಂಡಿದ್ದು, ಕರಡಿಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆಗೆ ಆಗ್ರಹಿಸಿದ್ದಾರೆ. ಈ ಘಟನೆ ಪ್ರದೇಶದಲ್ಲಿ ಆತಂಕ ಮೂಡಿಸಿದೆ.