ಮದುವೆ ಆಗಲು ಹೆಣ್ಣು ಸಿಗುತ್ತಿಲ್ಲವೆಂದು ಯುವಕನೊಬ್ಬ ಮೊಬೈಲ್ ಟವರ್ ಏರಿದ ಘಟನೆ ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ನಡೆದಿದೆ. ಶ್ರೀಶೈಲ ನಾಗಪ್ಪ ರಾಮತೀರ್ಥ ಎಂಬಾತನೇ ಮೊಬೈಲ್ ಟವರ್ ಏರಿದ ಯುವಕ. ಕೊನೆಗೆ ತಿಕೋಟಾ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಆತನನ್ನು ಮನವೊಲಿಸಿ ಕೆಳಗಿಳಿಸಿದ್ದಾರೆ. ಸದ್ಯ ಘಟನೆಯ ವಿಡಿಯೋ ವೈರಲ್ ಆಗುತ್ತಿದೆ.