ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಕನಕಪುರ ತಾಲೂಕಿನ ದೊಡ್ಡ ಆಲಹಳ್ಳಿ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಬಳಿಯೇ ಆನೆ ಪ್ರತ್ಯಕ್ಷವಾಗಿದೆ. ಒಂಟಿಸಲಗ ಕಂಡು ಶಾಲೆಯಲ್ಲಿದ್ದ ಮಕ್ಕಳು ಕೆಲಕಾಲ ಆತಂಕಗೊಂಡಿದ್ದು, ಎರಡು ದಿನಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಾಡಾನೆ ಶಾಲೆ ಆವರಣಕ್ಕೆ ನುಗ್ಗಿದ್ದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.