AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರಾವಣ ಮಾಸದಂದು ಶನಿವಾರ ಆಚರಣೆಯ ಹಿಂದಿನ ಮಹತ್ವ ತಿಳಿಯಿರಿ

ಶ್ರಾವಣ ಮಾಸದಂದು ಶನಿವಾರ ಆಚರಣೆಯ ಹಿಂದಿನ ಮಹತ್ವ ತಿಳಿಯಿರಿ

ಗಂಗಾಧರ​ ಬ. ಸಾಬೋಜಿ
|

Updated on: Jul 26, 2025 | 6:46 AM

Share

ಶ್ರಾವಣ ಮಾಸದ ಶನಿವಾರಗಳಿಗೆ ವಿಶೇಷ ಮಹತ್ವವಿದೆ. ಈ ದಿನ ಮಕ್ಕಳು ಗೋವಿಂದ ಗೋವಿಂದ ಎಂದು ಹಾಡುತ್ತಾ ಮನೆ ಮನೆಗೆ ತೆರಳಿ ಪಡಿ ಬೇಡುವುದು ಒಂದು ಸಂಪ್ರದಾಯ. ಇದರಿಂದ ಮಕ್ಕಳಲ್ಲಿ ದಾನ ಗುಣ ಮತ್ತು ಆಧ್ಯಾತ್ಮಿಕ ಶಕ್ತಿ ಬೆಳೆಯುತ್ತದೆ ಎಂದು ನಂಬಲಾಗಿದೆ. ಈ ಪದ್ದತಿಯು ಭಾರತೀಯ ಸನಾತನ ಸಂಸ್ಕೃತಿಯ ಭಾಗವಾಗಿದೆ.

ಬೆಂಗಳೂರು, ಜುಲೈ 26: ಶ್ರಾವಣ ಮಾಸದ ಶನಿವಾರಗಳು ಹಿಂದೂ ಧರ್ಮದಲ್ಲಿ ವಿಶೇಷ ಪವಿತ್ರ ದಿನಗಳಾಗಿವೆ. ಈ ದಿನ ಶನಿ ದೇವರಿಗೆ ಅರ್ಪಿತವಾದ್ದರಿಂದ ಇದಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತದೆ. ಕೆಲವು ಪ್ರದೇಶಗಳಲ್ಲಿ, ಮಕ್ಕಳು ಪಡಿ ಬೇಡುವ ಸಂಪ್ರದಾಯವಿದೆ. ಚಿಕ್ಕ ಮಕ್ಕಳು ಗೋವಿಂದ ಗೋವಿಂದ ಎಂದು ಹಾಡುತ್ತಾ ಮನೆ ಮನೆಗೆ ತೆರಳಿ ಅಕ್ಕಿ, ಬೇಳೆ, ಬೆಲ್ಲ ಮುಂತಾದ ದಾನವನ್ನು ಪಡೆಯುತ್ತಾರೆ. ಈ ಪದ್ದತಿಯು ಮಕ್ಕಳಲ್ಲಿ ದಾನಶೀಲತೆ, ಸಂಯಮ ಮತ್ತು ಆಧ್ಯಾತ್ಮಿಕತೆಯನ್ನು ಬೆಳೆಸುತ್ತದೆ. ಶ್ರಾವಣ ಶನಿವಾರದ ದಿನ ತಿರುಪತಿ ವೆಂಕಟೇಶ್ವರ ಅಥವಾ ಇತರ ದೇವರಿಗೆ ಈ ಕಾಣಿಕೆಗಳನ್ನು ಅರ್ಪಿಸುವುದು ಸಹ ಒಂದು ರೂಢಿಯಾಗಿದೆ. ಈ ಸಂಪ್ರದಾಯವು ಭಾರತೀಯ ಸನಾತನ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ.

 

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More