ಶ್ರೀಕಾಂತ್ ಪೂಜಾರಿ ವಿರುದ್ಧ 16 ಪ್ರಕರಣಗಳಿವೆ, ಎಫ್ಐಅರ್ ನಲ್ಲಿ ಕರಸೇವಕ ಅಂತಿಲ್ಲ: ಜಿ ಪರಮೇಶ್ವರ, ಗೃಹ ಸಚಿವ

ಅರುಣ್​ ಕುಮಾರ್​ ಬೆಳ್ಳಿ

Updated on: Jan 03, 2024 | 12:15 PM

ಗೃಹ ಸಚಿವ ಜಿ ಪರಮೇಶ್ವರ ಅವರನ್ನು ವಿರೋಧ ಪಕ್ಷಗಳ ಯಾಕೆ ಇಷ್ಟಪಡುತ್ತಾರೆ ಮತ್ತು ಗೌರವಿಸುತ್ತಾರೆ ಅನ್ನೋದಕ್ಕೆ ಕಾರಣ ಇಲ್ಲಿದೆ. ಸುನೀಲ ಕುಮಾರ್ ನಿನ್ನೆ ಮಾತಾಡಿದ್ದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹೇಳಿದ್ದರೆ ಅವರು ಉದ್ರಿಕ್ತರಾಗಿ ಪ್ರತಿಕ್ರಿಯೆ ನೀಡುತ್ತಿದ್ದರು. ಆದರೆ, ಪರಮೇಶ್ವರ್ ಉದ್ವೇಗಕ್ಕೆ ಅವಕಾಶ ನೀಡದೆ ಶಾಂತವಾಗೇ ಮಾರ್ಮಿಕ ಉತ್ತರ ನೀಡುತ್ತಾರೆ.

ಬೆಂಗಳೂರು: ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿಯ (Srikanth Pujari) ಬಂಧನ ವಿರೋಧಿಸಿ ರಾಜ್ಯ ಬಿಜೆಪಿ ಘಟಕ ಇಂದು ಪ್ರತಿಭಟನೆ ನಡೆಸುತ್ತಿದ್ದರೆ ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಜಿ ಪರಮೇಶ್ವರ (G Parameshwara), ಪೂಜಾರಿ ರಾಮ ಕರಸೇವಕ (Ram Karsevak) ಅನ್ನೋ ಕಾರಣಕ್ಕೆ ಬಂಧಿಸಿಲ್ಲ, ಅವರ ವಿರುದ್ಧ 16 ಪ್ರಕರಣಗಳಿವೆ ಎಂದು ಹೇಳಿದರು. 31 ವರ್ಷಗಳ ಹಿಂದಿನ ಪ್ರಕರಣದ ಪ್ರಶ್ನೆ ಇಲ್ಲಿ ಉದ್ಭವಿಸಲ್ಲ, ಈ ಅವಧಿಯಲ್ಲಿ ಬಿಜೆಪಿ ಸರ್ಕಾರಗಳು ಅಧಿಕಾರ ನಡೆಸಿದವಲ್ಲ, ಯಾಕೆ ಪೂಜಾರಿಯನ್ನು ಪ್ರಕರಣಗಳಿಂದ ಖುಲಾಸೆ ಮಾಡಲಿಲ್ಲ ಎಂದು ಪರಮೇಶ್ವರ್ ಪ್ರಶ್ನಿಸಿದರು. ನಿನ್ನೆ ಬಿಜೆಪಿ ಶಾಸಕ ಸುನೀಲ ಕುಮಾರ್, ರಾಮ ಕರಸೇವಕರ ಪಟ್ಟಿ ಕೊಡ್ತೀನಿ ತಾಕತ್ತಿದ್ದರೆ ಬಂಧಿಸಲಿ ಅಂತ ಸವಾಲೆಸೆದಿರುವ ಬಗ್ಗೆ ಗೃಹ ಸಚಿವರಿಗೆ ಹೇಳಿದಾಗ, ತಾಕತ್ತನ್ನು ಜನ ತಮಗೆ ಕೊಟ್ಟಿದ್ದಾರೆ, ತಮ್ಮದು ಚುನಾಯಿತ ಸರ್ಕಾರ ಮತ್ತು ಯಾವುದೇ ಚುನಾಯಿತ ಸರ್ಕಾರ ಕಾನೂನಡಿಯಲ್ಲಿ ಕೆಲಸ ಮಾಡುತ್ತದೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.