ಗುರುವಾರ ಉತ್ತರ ಕರ್ನಾಟಕ, ಶುಕ್ರವಾರ ಬೆಂಗಳೂರು ಶನಿವಾರ ಪುನಃ ಉತ್ತರ ಕರ್ನಾಟಕ! ಸಿದ್ದರಾಮಯ್ಯ ಕಾಲಿಗೆ ಚಕ್ರಗಳು!!

ಅರುಣ್​ ಕುಮಾರ್​ ಬೆಳ್ಳಿ

Updated on: Feb 18, 2023 | 4:37 PM

ಅವರು ಭಾಷಣ ಮಾಡಲು ಅಂತ ಎದ್ದು ನಿಲ್ಲುತ್ತಿದ್ದಂತೆಯೇ ಜನ ಜೋರಾಗಿ ಅರಚಲು ಪ್ರಾರಂಭಿಸುತ್ತಾರೆ. ಅವರನ್ನು ಸುಮ್ಮನಿರುವಂತೆ ಸೂಚನಾರ್ಥಕವಾಗಿ ಹೇಳಿ ಸಿದ್ದರಾಮಯ್ಯ ಮಾತು ಆರಂಭಿಸುತ್ತಾರೆ.

ಕೊಪ್ಪಳ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು (Siddaramaiah) ಕಾಲಿಗೆ ಚಕ್ರಗಳನ್ನು ಕಟ್ಟಿಕೊಂಡಿರುವಂತಿದೆ. ಗುರುವಾರ ಉತ್ತರ ಕರ್ನಾಟಕದ ಒಂದು ಜಿಲ್ಲೆಯಲ್ಲಿ ಕಾಣಿಸುತ್ತಾರೆ ಶುಕ್ರವಾರದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಬಜೆಟ್ ಮಂಡಿಸುವಾಗ ಸದನದಲ್ಲಿ ಕಿವಿ ಮೇಲೆ ಹೂ ಇಟ್ಟುಕೊಂಡು ಕಾಣಿಸುತ್ತಾರೆ ಮತ್ತು ಇವತ್ತು (ಶನಿವಾರ) ಪುನಃ ಉತ್ತರ ಕರ್ನಾಟಕದ ಯಲಬುರ್ಗಾದಲ್ಲಿ ಸಂಗೊಳ್ಳಿ ರಾಯಣ್ಣನ (Sangolli Rayanna) ಪ್ರತಿಮೆ ಅನಾವರಣಗೊಳಿಸಿ ಸಭೆಯೊಂದನ್ನು ಉದ್ದೇಶಿಸಿ ಮಾತಾಡುತ್ತಾರೆ. ಸಿದ್ದರಾಮಯ್ಯ ಸರ್ವಾಂತರಯಾಮಿ? ಇರಬಹುದು ಮಾರಾಯ್ರೇ. ಅವರು ಭಾಷಣ ಮಾಡಲು ಅಂತ ಎದ್ದು ನಿಲ್ಲುತ್ತಿದ್ದಂತೆಯೇ ಜನ ಜೋರಾಗಿ ಅರಚಲು ಪ್ರಾರಂಭಿಸುತ್ತಾರೆ. ಅವರನ್ನು ಸುಮ್ಮನಿರುವಂತೆ ಸೂಚನಾರ್ಥಕವಾಗಿ ಹೇಳಿ ಸಿದ್ದರಾಮಯ್ಯ ಮಾತು ಆರಂಭಿಸುತ್ತಾರೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.