Pancharatna Yatre; ಸಿದ್ದರಾಮಯ್ಯ ಮತ್ತು ಶ್ರೀರಾಮುಲುರಿಂದ ಬಾದಾಮಿ ಜನರಿಗೆ ಯಾವುದೇ ಉಪಯೋಗವಾಗಿಲ್ಲ: ಹೆಚ್ ಡಿ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ

Updated on: Mar 07, 2023 | 11:03 AM

ಹಿಂದಿನ ಬಾರಿ ಸ್ಪರ್ಧಿಸಿದ್ದ ಸಿದ್ದರಾಮಯ್ಯ ಮತ್ತು ಬಿ ಶ್ರೀರಾಮುಲು ಕೇವಲ ಚುನಾವಣೆ ಸಮಯದಲ್ಲಿ ಮಾತ್ರ ಬಾದಾಮಿಗೆ ಬಂದಿದ್ದರು ಎಂದು ಕುಮಾರಸ್ವಾಮಿ ಹೇಳಿದರು

ಬಾಗಲಕೋಟೆ: ಜೆಡಿಎಸ್ ಪಕ್ಷದ ಪಂಚರತ್ನ ಯಾತ್ರೆ ಇಂದು ಬಾಗಲಕೋಟೆ ಜಿಲ್ಲೆ ತಲುಪಿದ್ದು ಸಿದ್ದ್ದರಾಮಯ್ಯನವರ ಕ್ಷೇತ್ರವಾಗಿರುವ ಬಾದಾಮಿಯಲ್ಲಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಸಾರ್ವಜನಿಕ ಸಭೆಯೊಂದನ್ನು ಉದ್ದೇಶಿಸಿ ಮಾತಾಡಿದರು. ಹನುಮಂತಪ್ಪ ಎನ್ನುವವರನ್ನು ಪಕ್ಷದ ಅಭ್ಯರ್ಥಿಯೆಂದು ಘೋಷಿಸಿದ ಕುಮಾರಸ್ವಾಮಿಯವರು ತಮ್ಮ ಅಭ್ಯರ್ಥಿ ಬಾದಾಮಿ ಜನರ ಮನೆ ಮಗನಂತಿರುವುದರಿಂದ ಗೆಲ್ಲಿಸಬೇಕೆಂದು ಆಗ್ರಹಿಸಿದರು. ಹಿಂದಿನ ಬಾರಿ ಸ್ಪರ್ಧಿಸಿದ್ದ ಸಿದ್ದರಾಮಯ್ಯ (Siddaramaiah) ಮತ್ತು ಬಿ ಶ್ರೀರಾಮುಲು (B Sriramulu) ಕೇವಲ ಚುನಾವಣೆ ಸಮಯದಲ್ಲಿ ಮಾತ್ರ ಬಾದಾಮಿಗೆ ಬಂದಿದ್ದರು, ಅಂಥವರನ್ನು ನೆಚ್ಚಿಕೊಳ್ಳುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 07, 2023 10:12 AM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.