ಶಾಸಕ ಎಂವೈ ಪಾಟೀಲ್ ಕಲಬುರಗಿ ಮನೆಯಲ್ಲಿ ಉತ್ತರ ಕರ್ನಾಟಕದ ಊಟ ಸವಿದ ಸಿದ್ದರಾಮಯ್ಯ, ಶಿವಕುಮಾರ್!

ಅರುಣ್​ ಕುಮಾರ್​ ಬೆಳ್ಳಿ

Updated on: Aug 05, 2023 | 7:20 PM

ಕಾಂಗ್ರೆಸ್ ನಾಯಕರಿಗೆ ಪಾಟೀಲ್ ಮನೆಯಲ್ಲೇ ಔತಣ ಏರ್ಪಡಿಸಲಾಗಿತ್ತು. ಎಲ್ಲರೂ ಭರ್ಜರಿಯಾಗಿ ಉತ್ತರ ಕರ್ನಾಟಕ ಊಟ ಸವಿದರು ಅಂತ ಅವರ ಮುಖಗಳ ಭಾವದಿಂದ ಗೊತ್ತಾಗುತ್ತದೆ

ಕಲಬುರಗಿ: ಕಲ್ಯಾಣ ಕರ್ನಾಟಕ ಊಟದ ವೈಶಿಷ್ಟ್ಯತೆಯೇ ಹಾಗೆ ಮಾರಾಯ್ರೇ, ಬಾಯಿ ಚಪ್ಪರಿಸಿಕೊಂಡು ತಿನ್ನುವ ಹಾಗೆ. ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಬಿಡಿ ಅವರು ಕಲಬುರಗಿಯವರು, ಅವರಿಗೆ ಈ ಊಟ ಹೊಸದಲ್ಲ. ಅದರೆ ಇಂದು ಗೃಹ ಜ್ಯೋತಿ ಕಾರ್ಯಕ್ರಮಕ್ಕಾಗಿ ಕಲಬುರಗಿಗೆ ಬಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಜೋಳದ ರೊಟ್ಟಿ, ಪುಂಡಿಪಲ್ಯ, ಎಣ್ಣೆ ಬದನೆಕಾಯಿ, ಕಾಳು ಪಲ್ಯ, ಶೇಂಗಾ ಹೋಳಿಗೆ, ಶೇಂಗಾ ಹಿಂಡಿ, ಬೇಳೆ ಸಾರು (ಸಾಂಬಾರ್) ಗಟ್ಟಿ ಮೊಸರು, ಬಾನದಹಿಟ್ಟು ಮೊದಲಾದವುಗಳನ್ನೊಳಗೊಂಡ ಸ್ವಾದಿಷ್ಟಕರ ಊಟ ಬೆಂಗಳೂರಲ್ಲಿ ಸಿಗಲಾರದು. ಈಗ ಅಲ್ಲೂ ಉತ್ತರ ಕರ್ನಾಟಕದ ಖಾನಾವಳಿ ಆಗಿವೆ ಮತ್ತು ಕೆಲ ಸ್ಟೋರ್ ಗಳಲ್ಲಿ ಸಿಗುತ್ತಿವೆ; ಅದು ಬೇರೆ ವಿಚಾರ. ಮೇಲೆ ಉಲ್ಲೇಸಿದ ಆಹಾರ ಪದಾರ್ಥಗಳಲ್ಲಿ ಹೆಚ್ಚಿನವು ಇಂದು ಕಾಂಗ್ರೆಸ್ ಶಾಸಕ ಎಂವೈ ಪಾಟೀಲ್ ಮನೆಯಲ್ಲಿ ತಯಾರಾಗಿದ್ದವು. ಕಾಂಗ್ರೆಸ್ ನಾಯಕರಿಗೆ ಪಾಟೀಲ್ ಮನೆಯಲ್ಲೇ ಔತಣ ಏರ್ಪಡಿಸಲಾಗಿತ್ತು. ಎಲ್ಲರೂ ಭರ್ಜರಿಯಾಗಿ ಉತ್ತರ ಕರ್ನಾಟಕ ಊಟ ಸವಿದರು ಅಂತ ಅವರ ಮುಖಗಳ ಭಾವದಿಂದ ಗೊತ್ತಾಗುತ್ತದೆ

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.