ಬೆಂಗಳೂರು ಗ್ರಾಮಾಂತರ, ಜೂ.11: ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ(Kempegowda International Airport)ಕ್ಕೆ ಇಂದು(ಜೂ.11) ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ (Rahul Gandhi) ಅವರು ಆಗಮಿಸಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ವಾಗತಿಸಿದರು. ಬಳಿಕ ಒಂದೇ ಕಾರಿನಲ್ಲಿ ರಾಹುಲ್ ಗಾಂಧಿ, ಸಿಎಂ, ಡಿಸಿಎಂ ಮೂವರು ಏರ್ಪೋರ್ಟ್ನಿಂದ ತಾಜ್ ಹೋಟೆಲ್ನತ್ತ ತೆರಳಿದರು. ಇಂದು ರಾತ್ರಿ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ನಾಳೆ(ಜೂ.12) ಬೆಳಗ್ಗೆ ರಾಹುಲ್ ಗಾಂಧಿ ಏರ್ಪೋರ್ಟ್ನಿಂದ ಕೇರಳಕ್ಕೆ ತೆರಳಲಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:41 pm, Tue, 11 June 24