Prajadhvani Yatre: ರಾಹುಲ್ ಗಾಂಧಿಯವರ ಭಾರತ ಜೋಡೋ ಯಾತ್ರೆ ಕಾಶ್ಮೀರ ತಲುಪಿದಾಗ ನಾನು ಸಿದ್ದರಾಮಯ್ಯ ಹೋಗಲಿದ್ದೇವೆ: ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: Jan 24, 2023 | 5:10 PM

ರಾಹುಲ್ ಗಾಂಧಿಯವರ ಯಾತ್ರೆ ಕಾಶ್ಮೀರ ತಲುಪಿದ ಬಳಿಕ ಅಲ್ಲೊಂದು ಸಭೆ ನಡೆಯುತ್ತದೆ ಅದರಲ್ಲಿ ಭಾಗವಹಿಸಲು ತಾವು ಮತ್ತು ಸಿದ್ದರಾಮಯ್ಯ ಜನೆವರು 30 ರಂದು ಹೋಗಲಿರುವುದಾಗಿ ಶಿವಕುಮಾರ ಹೇಳಿದರು.

ತುಮಮೂರು:  ಕರ್ನಾಟಕ ಕಾಂಗ್ರೆಸ್ ನಡೆಸುತ್ತಿರುವ ಪ್ರಜಾಧ್ವನಿ ಯಾತ್ರೆ ತುಮಕೂರು ತಲುಪಿದೆ. ನಗರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ (DK Shivakumar) ಅವರು ರಾಹುಲ್ ಗಾಂಧಿಯವರು (Rahul Gandhi) ನಡೆಸುತ್ತಿರುವ ಭಾರತ ಜೋಡೋ ಯಾತ್ರೆ ಮತ್ತು ತಾವು ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ನಡೆಸಿದ ಪಾದಯಾತ್ರೆಗಳ ಕಡೆ ಜನರ ಗಮನ ಸೆಳೆದರು. ರಾಹುಲ್ ಗಾಂಧಿಯವರ ಯಾತ್ರೆ ಕಾಶ್ಮೀರ ತಲುಪಿದ ಬಳಿಕ ಅಲ್ಲೊಂದು ಸಭೆ ನಡೆಯುತ್ತದೆ ಅದರಲ್ಲಿ ಭಾಗವಹಿಸಲು ತಾವು ಮತ್ತು ಸಿದ್ದರಾಮಯ್ಯ (Siddaramaiah) ಜನೆವರು 30 ರಂದು ಹೋಗಲಿರುವುದಾಗಿ ಶಿವಕುಮಾರ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.