Loading video

ಶುಭಾಶಯ ತಿಳಿಸಲು ಬಂದ ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿದ ತೇಜಸ್ವಿ ಸೂರ್ಯ ದಂಪತಿ

|

Updated on: Mar 09, 2025 | 5:16 PM

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹಮ್ಮದ್ ಖಾನ್​ ಅವರು ತೇಜಸ್ವಿ ಸೂರ್ಯ ಮದ್ವೆ ಆರತಕ್ಷತೆಯಲ್ಲಿ ಭಾಗವಹಿಸಿ ಶುಭಾಶಯ ಕೋರಿದ್ದಾರೆ. ಇನ್ನು ಇದೇ ವೇಳೆ ತೇಜಸ್ವಿ ಸೂರ್ಯ ದಂಪತಿ ಸಿದ್ದರಾಮಯ್ಯನವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿತು. ಅಲ್ಲದೇ ಈ ವೇಳೆ ತೇಜಸ್ವಿ ಸೂರ್ಯ ತನ್ನ ಮಡದಿಗೆ ಸಿಎಂ ಪರಿಚಯ ಮಾಡಿಕೊಟ್ಟರು.

ಬೆಂಗಳೂರು, (ಮಾರ್ಚ್​ 09): ಮೊನ್ನೆ ಅಷ್ಟೇ ಬಿಜೆಪಿ ಯುವನಾಯಕ, ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಇಂದು (ಮಾರ್ಚ್​ 09) ಬೆಂಗಳೂರಿನ ಅರಮನೆ ಮೈದಾನದಲ್ಲಿ ತೇಜಸ್ವಿ ಸೂರ್ಯ, ಶಿವಶ್ರೀ ಆರತಕ್ಷತೆ ಅದ್ಧೂರಿಯಾಗಿ ನಡೆದಿದೆ. ತೇಜಸ್ವಿ ಸೂರ್ಯ, ಶಿವಶ್ರೀ ಸ್ಕಂದಪ್ರಸಾದ್ ಮದುವೆಯ ಆರತಕ್ಷತೆಗೆ ಗಣ್ಯಾತಿಗಣ್ಯರ ದಂಡೇ ಹರಿದು ಬಂದಿದೆ. ಸಿನಿಮಾ ತಾರೆಯರು, ಕಾಂಗ್ರೆಸ್, ಬಿಜೆಪಿ ಪಕ್ಷದ ಹಲವು ಮುಖಂಡರು ಈ ಸಮಾರಂಭಕ್ಕೆ ಸಾಕ್ಷಿಯಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹಮ್ಮದ್ ಖಾನ್​ ಅವರು ಆರತಕ್ಷತೆಯಲ್ಲಿ ಭಾಗವಹಿಸಿ ಮದುವೆಯ ಶುಭಾಶಯ ಕೋರಿದ್ದಾರೆ. ಇನ್ನು ಇದೇ ವೇಳೆ ತೇಜಸ್ವಿ ಸೂರ್ಯ ಅವರು ಸಿದ್ದರಾಮಯ್ಯನವರ ಕಾಲು ಮುಟ್ಟಿ ಆಶೀರ್ವಾದ ಪಡೆದುಕೊಂಡರು.