ಡಿಕೆಶಿ ಸಿಎಂ ಪದಗ್ರಹಣದ ಬಗ್ಗೆ ಪ್ರಶ್ನಿಸುತ್ತಿದ್ದಂತೆಯೇ ಸಿದ್ದರಾಮಯ್ಯ ಫುಲ್ ಗರಂ

Updated on: Oct 31, 2025 | 4:31 PM

ಡಿಕೆ ಶಿವಕುಮಾರ್ (D.K.Shivakumar) ಅವರು ನವೆಂಬರ್ 21 ಕ್ಕೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುತ್ತಾರಂತೆ ಎಂಬ ಅಂತೆ ಕಂತೆ ಚರ್ಚೆ ಜೋರಾಗಿದೆ.ಈ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ (Siddaramaiah) ಗರಂ ಆಗಿದ್ದಾರೆ. ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯದ ಜತೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುವಾಗ ಸಿಎಂಗೆ ಡಿಕೆಶಿ ಪದಗ್ರಹಣ ಬಗ್ಗೆ ಪ್ರಶ್ನಿಸಲಾಯ್ತು.

ಬೆಂಗಳೂರು, (ಅಕ್ಟೋಬರ್ 31): ಡಿಕೆ ಶಿವಕುಮಾರ್ (D.K.Shivakumar) ಅವರು ನವೆಂಬರ್ 21 ಕ್ಕೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುತ್ತಾರಂತೆ ಎಂಬ ಅಂತೆ ಕಂತೆ ಚರ್ಚೆ ಜೋರಾಗಿದೆ.ಈ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ (Siddaramaiah) ಗರಂ ಆಗಿದ್ದಾರೆ. ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯದ ಜತೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುವಾಗ ಸಿಎಂಗೆ ಡಿಕೆಶಿ ಪದಗ್ರಹಣ ಬಗ್ಗೆ ಪ್ರಶ್ನಿಸಲಾಯ್ತು. ಇದರಿಂದ ಗರಂ ಆದ ಸಿದ್ದರಾಮಯ್ಯ, ಯಾರ್ ಹೇಳಿದ್ದು? ನಿನಗೆ ಯಾರ್ ಹೇಳಿದ್ರು? ನಿನಗೆ ಹೆಂಗೆ ಗೊತ್ತಾಯ್ತು? ಯಾವ ಪತ್ರಿಕೆ? ಯಾಬ ಪತ್ರಿಕೆ ನೋಡಿದೆ ನೀನು? ನಾನು ಎಲ್ಲಾ ಪತ್ರಿಕೆ ಓದುತ್ತೇನೆ. ಯಾವುದರಲ್ಲೂ ಬಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಬಳಿಕ ಪತ್ರಿಕೆಯ ಹೆಸರು ಹೇಳಿದಾಗ, ಯಾವುದೇ ಪ್ರತಿಕ್ರಿಯೆ ನೀಡದೇ ತೆರಳಿದರು.

Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More