AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಸಂಕಷ್ಟದ ಮಧ್ಯ ಸಿಎಂ ವಿದ್ಯುತ್ ಸ್ಥಾವರ ಲೋಕಾರ್ಪಣೆ, ಎಲ್ಲಾ ನೌಕರರಿಗೆ ಬೋನಸ್ ಘೋಷಣೆ

ಮುಡಾ ಸಂಕಷ್ಟದ ಮಧ್ಯ ಸಿಎಂ ವಿದ್ಯುತ್ ಸ್ಥಾವರ ಲೋಕಾರ್ಪಣೆ, ಎಲ್ಲಾ ನೌಕರರಿಗೆ ಬೋನಸ್ ಘೋಷಣೆ

ರಮೇಶ್ ಬಿ. ಜವಳಗೇರಾ
|

Updated on: Sep 24, 2024 | 8:36 PM

Share

ಪತ್ನಿ ಹೆಸರಿಗೆ 14 ಮುಡಾ ನಿವೇಶನ ಹಂಚಿಕೆ ಪ್ರಕರಣ ಸಿಎಂ ಸಿದ್ದರಾಮಯ್ಯ ನಿದ್ದೆಗೆಡಿಸಿದೆ. ಆದರೂ ಸಿಎಂ ಸಿದ್ದರಾಮಯ್ಯ ಇಂದು ಸಂಜೆ ಕೆಪಿಟಿಸಿಎಲ್ ನೈಸರ್ಗಿಕ ಆಧಾರಿತ 370 ಮೆಗಾವ್ಯಾಟ್ ಸಾಮರ್ಥ್ಯದ ಯಲಹಂಕ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರ ಲೋಕಾರ್ಪಣೆಗೊಳಿಸಿದರು. ಅಲ್ಲದೇ ಎಲ್ಲ ಕಾರ್ಮಿಕರಿಗೆ 5 ಸಾವಿರ ಬೋನಸ್ ಘೋಷಿಸಿದರು.

ಬೆಂಗಳೂರು, (ಸೆಪ್ಟೆಂಬರ್ 24): ಮುಡಾ ಹಗರಣ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ತಂದಿಟ್ಟಿದೆ. ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 17 ಎ ಅಡಿ ರಾಜ್ಯಪಾಲರು ನೀಡಿರುವ ಅನುಮತಿಯನ್ನು ಎತ್ತಿಹಿಡಿದಿರುವ ಹೈಕೋರ್ಟ್ ಸಿಎಂ ಅರ್ಜಿಯನ್ನು ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಈ ಪ್ರಕರಣ ಸಿಎಂ ಸಿದ್ದರಾಮಯ್ಯ ನಿದ್ದೆಗೆಡಿಸಿದೆ. ಆದರೂ ಸಹ ಸಿಎಂ ಸಿದ್ದರಾಮಯ್ಯ ಸಹ ಇಂದು ಸಂಜೆ ಬೆಂಗಳೂರಿನ ಕೆಪಿಟಿಸಿಎಲ್ ನೈಸರ್ಗಿಕ ಆಧಾರಿತ 370 ಮೆಗಾವ್ಯಾಟ್ ಸಾಮರ್ಥ್ಯದ ಯಲಹಂಕ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ವೇಳೆ ಈ ಪ್ಲಾಂಟ್ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದು, ಇದೇ ಖುಷಿಯಲ್ಲಿ ಎಲ್ಲ ಕಾರ್ಮಿಕರಿಗೆ 5 ಸಾವಿರ ಬೋನಸ್ ಕೊಡುತ್ತೇವೆ ಎಂದು ಘೋಷಣೆ ಮಾಡಿದರು.