Leader of Opposition apologizes: ಬೆಂಗಳೂರಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಕ್ಷಮೆಯಾಚಿಸಿದ ಸಿದ್ದರಾಮಯ್ಯ!

ಅರುಣ್​ ಕುಮಾರ್​ ಬೆಳ್ಳಿ

Updated on: Mar 21, 2023 | 4:13 PM

ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯೊಂದರಲ್ಲಿ ಭಾಗಿಯಾಗಿದ್ದ ಕಾರಣ ಸರ್ವಜ್ಞ ನಗರಕ್ಕೆ ಬರುವುದು ತಡವಾಯಿತು, ಅದಕ್ಕಾಗಿ ಕ್ಷಮೆಯಾಚಿಸುವುದಾಗಿ ಸಿದ್ದರಾಮಯ್ಯ ಹೇಳುತ್ತಾರೆ.

ಬೆಂಗಳೂರು: ನಗರದ ಸರ್ವಜ್ಞ ನಗರ (Sarvagnanagar) ಕ್ಷೇತ್ರದಲ್ಲಿ ಇಂದು ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಕ್ಷಮೆ ಕೇಳುವ ಪ್ರಸಂಗ ಎದುರಾಯಿತು ಮಾರಾಯ್ರೇ. ಓದಿ ನಿಮಗೂ ಆಶ್ವರ್ಯವಾಗುತ್ತಿರಬಹುದು. ಸಿದ್ದರಾಮಯ್ಯ ಅಂಡ್ ಸಾರಿ? ನೋವೇಸ್ ಅಂತ ನೀವು ಅಂದಕೊಳ್ಳುತ್ತಿರಬಹುದು. ಆದರೆ ಇಂಥ ಕ್ಷಮೆಗಳನ್ನು ಅವರು ತಮ್ಮ ರಾಜಕೀಯ ಬದುಕಿನಲ್ಲಿ ಹಲವಾರು ಬಾರಿ ಕೇಳಿದ್ದಾರೆ. ವಿಷಯವೇನೆಂದರೆ, ಇಲ್ಲಿ ನಡೆಯುತ್ತಿರುವ ಸಮಾವೇಶಕ್ಕೆ ಅವರು ತಡವಾಗಿ ಆಗಮಿಸಿದರು. ಕೆಪಿಸಿಸಿ ಕಚೇರಿಯಲ್ಲಿ (KPCC office) ನಡೆದ ಸಭೆಯೊಂದರಲ್ಲಿ ಭಾಗಿಯಾಗಿದ್ದ ಕಾರಣ ಸರ್ವಜ್ಞ ನಗರಕ್ಕೆ ಬರುವುದು ತಡವಾಯಿತು, ಅದಕ್ಕಾಗಿ ಕ್ಷಮೆಯಾಚಿಸುವುದಾಗಿ ಸಿದ್ದರಾಮಯ್ಯ ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 21, 2023 04:12 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.