AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prajadhvani Yatre: ವೇದಿಕೆಯ ಮೇಲಿದ್ದ ಸಿದ್ದರಾಮಯ್ಯನವರಲ್ಲಿಗೆ ತನ್ನ ಪುಟ್ಟ ಮಗುವನ್ನು ಒಯ್ದ ಅಭಿಮಾನಿಯೊಬ್ಬ ಮಗನಿಗೆ ಸಿದ್ದರಾಮಯ್ಯ ಹೆಸರಿಟ್ಟಿದ್ದೇನೆ ಅಂದ!

Prajadhvani Yatre: ವೇದಿಕೆಯ ಮೇಲಿದ್ದ ಸಿದ್ದರಾಮಯ್ಯನವರಲ್ಲಿಗೆ ತನ್ನ ಪುಟ್ಟ ಮಗುವನ್ನು ಒಯ್ದ ಅಭಿಮಾನಿಯೊಬ್ಬ ಮಗನಿಗೆ ಸಿದ್ದರಾಮಯ್ಯ ಹೆಸರಿಟ್ಟಿದ್ದೇನೆ ಅಂದ!

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Feb 10, 2023 | 3:42 PM

Share

ಅದೇ ಸಮಯಕ್ಕೆ ಯಾರೋ ಒಬ್ಬರು ಭಾಷಣ ಮಾಡುತ್ತಿದ್ದುದ್ದರಿಂದ ಸಿದ್ದರಾಮಯ್ಯ ಅಭಿಮಾನಿಗೆ ಏನು ಹೇಳಿದರು ಅನ್ನೋದು ಗೊತ್ತಾಗುವುದಿಲ್ಲ.

ಯಾದಗಿರಿ: ಸಿದ್ದರಾಮಯ್ಯ (Siddaramaiah) ನೇತೃತ್ವದ ಪ್ರಜಾಧ್ವನಿ ಯಾತ್ರೆ (Prajadhvani Yatre) ಯಾದಗಿರಿ ತಲುಪಿದೆ. ಶುಕ್ರವಾರ ನಗರದಲ್ಲಿ ಕಾಂಗ್ರೆಸ್ ಪಕ್ಷದ ಸಮಾವೇಶ ನಡೆಯುತ್ತಿದ್ದಾಗ ಒಂದು ಪ್ರಸಂಗ ನಡೆಯಿತು ಮಾರಾಯ್ರೇ. ವೇದಿಕೆಯ ಮೇಲೆ ಸಿದ್ದರಾಮಯ್ಯ ಇತರ ನಾಯಕರೊಂದಿಗೆ ಕುಳಿತಿರುವಾಗ ಅವರ ಕಟ್ಟಾ ಅಭಿಮಾನಿಯೊಬ್ಬ (fan) ತನ್ನ ನಾಲ್ಕು ತಿಂಗಳು ಪ್ರಾಯದ ಮಗ ಮತ್ತು ಪತ್ನಿಯೊಂದಿಗೆ ಅವರಲ್ಲಿಗೆ ಹೋಗುತ್ತಾನೆ. ತನ್ನ ಮಗುವನ್ನು ಆಶೀರ್ವದಿಸಬೇಕೆಂದು ಕೋರುವ ಆತ ಮಗನಿಗೆ ಸಿದ್ದರಾಮಯ್ಯ ಅಂತ ಹೆಸರಿಟ್ಟಿರುವುದಾಗಿ ಹೇಳುತ್ತಾನೆ. ಅದೇ ಸಮಯಕ್ಕೆ ಯಾರೋ ಒಬ್ಬರು ಭಾಷಣ ಮಾಡುತ್ತಿದ್ದುದ್ದರಿಂದ ಸಿದ್ದರಾಮಯ್ಯ ಅಭಿಮಾನಿಗೆ ಏನು ಹೇಳಿದರು ಅನ್ನೋದು ಗೊತ್ತಾಗುವುದಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 10, 2023 03:42 PM
Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.