Karnataka Assembly Polls: ಕೋಲಾರ ಟಿಕೆಟ್ ನೀಡಬೇಕೆಂದು ರಂದೀಪ್ ಸುರ್ಜೆವಾಲಾ ಮುಂದೆ ಗಲಾಟೆ ಮಾಡಿದ ಕಾರ್ಯಕರ್ತರನ್ನು ಗದರಿದ ಸಿದ್ದರಾಮಯ್ಯ

Updated on: Apr 01, 2023 | 6:14 PM

ಸುರ್ಜೆವಾಲಾ ಪಕ್ಷದ ಪ್ರಧಾನ ಕಾರ್ಯದರ್ಶಿಗಳಾಗಿದ್ದಾರೆ, ಅವರ ಮುಂದೆ ಹೀಗೆ ವರ್ತಿಸುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ಕೋಪದಿಂದ ಹೇಳಿದರು

ಕೋಲಾರ: ಕಾಂಗ್ರೆಸ್ ಪಕ್ಷ ನಗರದಲ್ಲಿ ಇಂದು ನಡೆಸಿದ ಸಭೆ ಗಲಾಟೆಮಯವಾಗಿತ್ತು. ಅದಕ್ಕೆ ಕಾರಣವೂ ಇದೆ. ಸಿದ್ದರಾಮಯ್ಯ (Siddaramaiah) ಕೋಲಾರದಿಂದ ಸ್ಪರ್ಧಿಸಲಿದ್ದಾರೆ ಎಂದು ರಾಜ್ಯದಾದ್ಯಂತ ಟಾಂ ಟಾಂ ಅಗಿದ್ದರಿಂದ ಸಹಜವಾಗೇ ಕೋಲಾರ ಕಾಂಗ್ರೆಸ್ ಕಾರ್ಯಕರ್ತರು ಉತ್ಸುಕರಾಗಿದ್ದರು. ಮೊದಲ ಪಟ್ಟಿಯಲ್ಲಿ ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲಿರುವುದು ಗೊತ್ತಾದ ಬಳಿಕ ಅವರು ಅಸಮಧಾನಗೊಂಡಿದ್ದಾರೆ. ಹಾಗಾಗಿ, ಇಂದು ಸಿದ್ದರಾಮಯ್ಯ, ಎಐಸಿಸಿ ಕರ್ನಾಟಕ ಉಸ್ತುವಾರಿ ರಂದೀಪ್ ಸುರ್ಜೆವಾಲಾ (Randeep Surjewala), ಡಿಕೆ ಶಿವಕುಮಾರ (DK Shivakumar) ಆಗಮಿಸಿದ್ದಾಗ ಕಾರ್ಯಕರ್ತರು ಎರಡನೇ ಪಟ್ಟಿಯಲ್ಲಿ ಸಿದ್ದರಾಮಯ್ಯಗೆ ಕೋಲಾರ ಟಿಕೆಟ್ ಕೊಡಿ ಅಂತ ಸುರ್ಜೆವಾಲ ಎದುರು ಹಟಕ್ಕೆ ಬಿದ್ದರು. ಆಗಲೇ ಸಿದ್ದರಾಮಯ್ಯ ತಾಳ್ಮೆ ಕಳೆದುಕೊಂಡು ಕಾರ್ಯಕರ್ತರನ್ನು ಗದರಿದರು. ಸುರ್ಜೆವಾಲಾ ಪಕ್ಷದ ಪ್ರಧಾನ ಕಾರ್ಯದರ್ಶಿಗಳಾಗಿದ್ದಾರೆ, ಅವರ ಮುಂದೆ ಹೀಗೆ ವರ್ತಿಸುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ಕೋಪದಿಂದ ಹೇಳಿದರು

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More