ಪೇಸಿಎಮ್ ಅಭಿಯಾನ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಶೋಭೆ ನೀಡದು: ಬಿ ಎಸ್ ಯಡಿಯೂರಪ್ಪ
ಕಾಂಗ್ರೆಸ್ ಆಡಳಿತಾವಧಿಯಲ್ಲಿ ಅನೇಕ ಹಗರಣಗಳು ನಡೆದಿವೆ, ಹಾಗಾಗೇ ನಾಡಿನಾದ್ಯಂತ ಜನ ಆ ಪಕ್ಷವನ್ನು ತಿರಸ್ಕರಿಸಿದ್ದಾರೆ. ಕೇಂದ್ರ ಮತ್ತು ಹಲವಾರು ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸ್ವಚ್ಛ ಆಡಳಿತವನ್ನು ನೀಡುತ್ತಿದೆ ಎಂದು ಬಿಎಸ್ವೈ ಹೇಳಿದರು.
ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು (BS Yediyurappa) ಮಂಗಳವಾರ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿ ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಪೇಸಿಎಮ್ ಅಭಿಯಾನವನ್ನು ಖಂಡಿಸಿದರು. ಕಾಂಗ್ರೆಸ್ ಆಡಳಿತಾವಧಿಯಲ್ಲಿ ಅನೇಕ ಹಗರಣಗಳು ನಡೆದಿವೆ, ಹಾಗಾಗೇ ನಾಡಿನಾದ್ಯಂತ ಜನ ಆ ಪಕ್ಷವನ್ನು ತಿರಸ್ಕರಿಸಿದ್ದಾರೆ. ಕೇಂದ್ರ ಮತ್ತು ಹಲವಾರು ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸ್ವಚ್ಛ ಆಡಳಿತವನ್ನು ನೀಡುತ್ತಿದೆ. ಪೇಸಿಎಮ್ ನಂಥ ಅಭಿಯಾನ ನಡೆಸುವುದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ (DK Shivakumar) ಅವರಿಗೆ ಶೋಭೆ ನೀಡುವುದಿಲ್ಲ ಎಂದು ಯಡಿಯೂರಪ್ಪ ಹೇಳಿದರು.
Follow Us
