ಸಿದ್ದರಾಮಯ್ಯ 2009 ರಲ್ಲಿ ಸೋನಿಯಾ ಗಾಂಧಿಯನ್ನು ಬ್ಲ್ಯಾಕ್​ಮೇಲ್ ಮಾಡಿದಂತೆ ಈಗಲೂ ಮಾಡುತ್ತಿದ್ದಾರೆ: ಚಲವಾದಿ ನಾರಾಯಣಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ

Updated on: May 17, 2023 | 6:27 PM

ಕಾಂಗ್ರೆಸ್ ಹೈಕಮಾಂಡ್ ಮೊದಲಿನ ಹಾಗೆ ಶಕ್ತ ಮತ್ತು ಸಮರ್ಥವಾಗಿಲ್ಲ, ದುರ್ಬಲಗೊಂಡಿದೆ ಎಂದು ಚಲವಾದಿ ಹೇಳಿದರು.

ಬೆಂಗಳೂರು: ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದು ಈಗ ಬಿಜೆಪಿಯಿಂದ ಸಂಸದರಾಗಿರುವ ಚಲವಾದಿ ನಾರಾಯಣಸ್ವಾಮಿ (Chalavadi Narayanaswamy) ಇಂದು ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ಸಿದ್ದರಾಮಯ್ಯ ಒಬ್ಬ ಬ್ಲ್ಯಾಕ್ ಮೇಲ್ ರಾಜಕಾರಣಿ (blackmailer) ಎಂದು ಜರಿದರು. 2009 ರಲ್ಲಿ ಅವರು ತನ್ನನ್ನು ವಿರೋಧ ಪಕ್ಷದ ನಾಯಕನಾಗಿ ನೇಮಿಸದಿದ್ದರೆ ತನ್ನ ದಾರಿ ತಾನು ನೋಡಿಕೊಳ್ಳುವುದಾಗಿ ಆಗ ಎಐಸಿಸಿ ಅಧ್ಯಕ್ಷೆಯಾಗಿದ್ದ ಸೋನಿಯಾ ಗಾಂಧಿ (Sonia Gandhi) ಅವರನ್ನು ಬ್ಲ್ಯಾಕ್ ಮೇಲ್ ಮಾಡಿದ್ದರು ಎಂದು ಹೇಳಿದರು. ವಿಧಿಯಿಲ್ಲದೆ ಸೋನಿಯಾ ಗಾಂಧಿ ಆಗ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಲೋಕಸಭೆ ಚುನಾವಣೆಗೆ ಟಿಕೆಟ್ ನೀಡಿ ಅವರ ಸ್ಥಾನವನ್ನು ಸಿದ್ದರಾಮಯ್ಯ ನೀಡಿದ್ದರು. ಈಗಲೂ ಅವರು ದೆಹಲಿಯಲ್ಲಿ ಕೂತು ಅದನ್ನೇ ಮಾಡುತ್ತಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಮೊದಲಿನ ಹಾಗೆ ಶಕ್ತ ಮತ್ತು ಸಮರ್ಥವಾಗಿಲ್ಲ, ದುರ್ಬಲಗೊಂಡಿದೆ ಎಂದು ಚಲವಾದಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.