ಈಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ ಸ್ವಾಮಿ

Updated on: Nov 18, 2024 | 8:07 PM

ಮಲ್ಲಿಕಾರ್ಜುನ ಸ್ವಾಮಿ ಉದ್ದೇಶಪೂರ್ವಕವಾಗಿ ನಮ್ಮ ವರದಿಗಾರನೊಂದಿಗೆ ಮಾತಾಡದಿರುವ ಸಾಧ್ಯತೆಯಿದೆ ಅಥವಾ ಅವರು ಬೇರೆ ಯಾರದ್ದೋ ಸೂಚನೆ ಮೇರೆಗೆ ಮಾತಾಡದೆ ಹೋಗಿರಬಹುದು. ವಿಚಾರಣೆಗೆ ಕರೆದಿದ್ದರು, ಅವರು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿರುವೆ ಅಂತ ಅವರು ಹೇಳಿದ್ದರೂ ಆಗುತಿತ್ತು, ಆದರೆ ಹೇಳಲಿಲ್ಲ!

ಬೆಂಗಳೂರು: ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯದ ತನಿಖೆ ಮತ್ತು ವಿಚಾರಣೆ ಮುಂದುವರಿದಿದೆ. ಪ್ರಕರಣದಲ್ಲಿ ಮೂರನೇ ಅರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಇಂದು ಈಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದರು. ನಗರದ ಶಾಂತಿನಗರದಲ್ಲಿರುವ ಈಡಿ ಕಚೇರಿಯಿಂದ ಸ್ವಾಮಿ ಹೊರಬೀಳುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ನಮ್ಮ ಬೆಂಗಳೂರು ವರದಿಗಾರ ಮಲ್ಲಿಕಾರ್ಜುನ ಸ್ವಾಮಿ ಜೊತೆ ಮಾತಾಡುವ ಪ್ರಯತ್ನ ಮಾಡಿದರು. ಆದರೆ ಅವರು ತುಟಿಬಿಚ್ಚದೆ ತಮ್ಮ ಕಾರು ಹತ್ತಿ ಹೊರಟರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮುಡಾ ಹಗರಣ ಬಗೆಯುತ್ತಿದೆ ಇಡಿ: ಸಿಎಂ ಸಿದ್ದರಾಮಯ್ಯ ಖಾಸಗಿ ಆಪ್ತ ಸಹಯಕನಿಗೆ ಗ್ರಿಲ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More