AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Polls: ಶುಕ್ರವಾರವೂ ವರುಣಾದಲ್ಲಿ ದುನಿಯಾ ವಿಜಯ್, ನಿಶ್ವಿಕಾ ನಾಯ್ಡು ಮತ್ತು ಲೂಸ್ ಮಾದ ಜೊತೆ ಸಿದ್ದರಾಮಯ್ಯ ಅಬ್ಬರದ ಪ್ರಚಾರ

Karnataka Assembly Polls: ಶುಕ್ರವಾರವೂ ವರುಣಾದಲ್ಲಿ ದುನಿಯಾ ವಿಜಯ್, ನಿಶ್ವಿಕಾ ನಾಯ್ಡು ಮತ್ತು ಲೂಸ್ ಮಾದ ಜೊತೆ ಸಿದ್ದರಾಮಯ್ಯ ಅಬ್ಬರದ ಪ್ರಚಾರ

ಅರುಣ್​ ಕುಮಾರ್​ ಬೆಳ್ಳಿ
|

Updated on: May 05, 2023 | 12:30 PM

Share

ಚುನಾವಣಾ ಪ್ರಚಾರ ನಡೆಯುತ್ತಿದ್ದರೂ ಸಿನಿಮಾ ತಾರೆಯರ ಅಭಿಮಾನಿಗಳು ವಾಹನ ಹತ್ತಿ ಸೆಲ್ಫೀಗಳನ್ನು ತೆಗೆದುಕೊಳ್ಳುವುದು ಕೂಡ ನಡೆದೇ ಇತ್ತು.

ಮೈಸೂರು: ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ (Siddaramaiah) ಕ್ಷೇತ್ರದಲ್ಲಿ ಇಂದು ಸಹ ಅಬ್ಬರದ ಪ್ರಚಾರ ನಡೆಸಿದರು. ಅವರೊಂದಿಗೆ ನಿನ್ನೆ ಪ್ರಚಾರದಲ್ಲಿ ಭಾಗಿಯಾಗಿದ್ದ ಸಿನಿಮಾ ತಾರೆಯರು ದುನಿಯಾ ವಿಜಯ್ (Duniya Vijay), ಲೂಸ್ ಮಾದ (ಯೋಗೇಶ್) (Loose Mada) ಮತ್ತು ನಿಶ್ವಿಕಾ ನಾಯ್ಡು ಕೂಡ ಪ್ರಚಾರ ವಾಹನದಲ್ಲಿ ಕಾಣಿಸಿದರು. ವಾಹನದಲ್ಲಿ ನಿಂತ ಸಿದ್ದರಾಮಯ್ಯ ಮೈಕ್ ಹಿಡಿದು ಮಾತಾಡುತ್ತಿದ್ದರಾದರೂ ಸದ್ದು ಗದ್ದಲದಲ್ಲಿ ಅದು ಸರಿಯಾಗಿ ಕೇಳಿಸಲಿಲ್ಲ. ಸಿದ್ದರಾಮಯ್ಯ ಮತ್ತು ನಟನಟಿಯರ ಮೇಲೆ ಬೆಂಬಲಿಗರು ಹೂಮಳೆಗರೆಯುವುದು ಜಾರಿಯಲ್ಲಿತ್ತು. ಚುನಾವಣಾ ಪ್ರಚಾರ ನಡೆಯುತ್ತಿದ್ದರೂ ಸಿನಿಮಾ ತಾರೆಯರ ಅಭಿಮಾನಿಗಳು ವಾಹನ ಹತ್ತಿ ಸೆಲ್ಫೀಗಳನ್ನು ತೆಗೆದುಕೊಳ್ಳುವುದು ಕೂಡ ನಡೆದೇ ಇತ್ತು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More