ನಾನು, ಡಿಕೆ ಶಿವಕುಮಾರ್ ಚೆನ್ನಾಗಿಯೇ ಇದ್ದೇವೆ, ಸರ್ಕಾರ ಬಂಡೆಯಂತೆ ಭದ್ರ: ಡಿಸಿಎಂ ಕೈಹಿಡಿದೆತ್ತಿ ಸಿದ್ದರಾಮಯ್ಯ ಘೋಷಣೆ

Edited By:

Updated on: Jun 30, 2025 | 2:06 PM

ಶಾಸಕರ ಬಹಿರಂಗ ಹೇಳಿಕೆ, ಸಚಿವರಿಂದಲೇ ಭ್ರಷ್ಟಾಚಾರ ಆರೋಪ ಮತ್ತು ಕಾಂಗ್ರೆಸ್ ಆಂತರಿಕ ಸಂಘರ್ಷದ ಸಂಭದರ್ಭದಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಕೈಹಿಡಿದೆತ್ತಿ ನಾವಿಬ್ಬರೂ ಜತೆಯಾಗಿದ್ದೇವೆ ಎಂಬ ಸಂದೇಶವನ್ನು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಸಾರಿದರು. ಅಲ್ಲದೆ, ಸರ್ಕಾರ 5 ವರ್ಷ ಬಂಡೆಯಂತೆ ಸುಭದ್ರ ಎಂದರು. ವಿಡಿಯೋ ಇಲ್ಲಿದೆ ನೋಡಿ.

ಮೈಸೂರು, ಜೂನ್ 30: ‘ನಾನು ಮತ್ತು ಡಿಕೆ ಶಿವಕುಮಾರ್ ಚೆನ್ನಾಗಿಯೇ ಇದ್ದೇವೆ. ಈ ಸರ್ಕಾರ ಬಂಡೆ ತರ ಐದು ವರ್ಷ ಗಟ್ಟಿಯಾಗಿರುತ್ತದೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕಾಂಗ್ರೆಸ್ ಆಂತರಿಕ ಸಂಘರ್ಷ, ಮತ್ತೊಂದೆಡೆ ಶಾಸಕರ ಬಳಿ ಮಾತುಕತೆಗೆ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಬೆಂಗಳೂರಿಗೆ ಬರುವ ಸಂದರ್ಭದಲ್ಲೇ ಸಿಎಂ ಈ ಹೇಳಿಕೆ ನೀಡಿದ್ದಾರೆ. ಕೆಆರ್​ಎಸ್​ ಡ್ಯಾಂಗೆ ಬಾಗಿನ ಅರ್ಪಿಸುವುದಕ್ಕೂ ಮುನ್ನ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಬರೀ ಸುಳ್ಳು ಹೇಳುತ್ತಾರೆ. ನಾನು ಮತ್ತು ಡಿಕೆ ಶಿವಕುಮಾರ್ ಚೆನ್ನಾಗಿಯೇ ಇದ್ದೇವೆ ಎಂದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jun 30, 2025 02:04 PM
Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More