ಸ್ಪೆಷಲ್ ಫ್ಲೈಟ್​ನಲ್ಲಿ ಒಟ್ಟಿಗೆ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!

Updated on: Jun 01, 2026 | 12:05 PM

ಕಾಂಗ್ರೆಸ್ ಹೈಕಮಾಂಡ್‌ನೊಂದಿಗೆ ಮಹತ್ವದ ಸಭೆಗಳನ್ನು ನಡೆಸಲು ಹಂಗಾಮಿ ಸಿಎಂ ಸಿದ್ದರಾಮಯ್ಯ ಮತ್ತು ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ಇಬ್ಬರೂ ಒಟ್ಟಿಗೆ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ. ಅಧಿಕಾರ ಹಂಚಿಕೆ ಮತ್ತು ಸಂಪುಟ ಪುನರ್‌ರಚನೆ ಕುರಿತು ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ. ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಮತ್ತು ಹಿರಿಯ ನಾಯಕ ಹೆಚ್.ಸಿ. ಮಹದೇವಪ್ಪ ಸೇರಿದಂತೆ ಹಲವು ಮುಖಂಡರು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರೊಂದಿಗೆ ದೆಹಲಿಗೆ ಪ್ರಯಾಣಿಸಿದ್ದಾರೆ.

ಬೆಂಗಳೂರು, ಜೂನ್ 01: ಕಾಂಗ್ರೆಸ್ ಹೈಕಮಾಂಡ್‌ನೊಂದಿಗೆ ಮಹತ್ವದ ಸಭೆಗಳನ್ನು ನಡೆಸಲು ಹಂಗಾಮಿ ಸಿಎಂ ಸಿದ್ದರಾಮಯ್ಯ ಮತ್ತು ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ಇಬ್ಬರೂ ಒಟ್ಟಿಗೆ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ. ಅಧಿಕಾರ ಹಂಚಿಕೆ ಮತ್ತು ಸಂಪುಟ ಪುನರ್‌ರಚನೆ ಕುರಿತು ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ. ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಮತ್ತು ಹಿರಿಯ ನಾಯಕ ಹೆಚ್.ಸಿ. ಮಹದೇವಪ್ಪ ಸೇರಿದಂತೆ ಹಲವು ಮುಖಂಡರು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರೊಂದಿಗೆ ದೆಹಲಿಗೆ ಪ್ರಯಾಣಿಸಿದ್ದಾರೆ.

ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಮತ್ತು ರಾಜಕೀಯ ಸ್ಥಿತ್ಯಂತರಗಳ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ರಣದೀಪ್ ಸುರ್ಜೇವಾಲಾ ಅವರೊಂದಿಗೆ ಚರ್ಚೆಗಳು ನಡೆಯಲಿವೆ ಎಂದು ಮೂಲಗಳು ತಿಳಿಸಿವೆ. ಈ ಉನ್ನತ ಮಟ್ಟದ ಭೇಟಿ ರಾಜ್ಯ ರಾಜಕೀಯದಲ್ಲಿ ಮುಂದಿನ ಬೆಳವಣಿಗೆಗಳಿಗೆ ನಿರ್ಣಾಯಕವಾಗಬಹುದು. ಈ ಭೇಟಿಯು ಕರ್ನಾಟಕದಲ್ಲಿ ಸ್ಥಿರ ಸರ್ಕಾರ ರಚನೆಗೆ ಅಡಿಪಾಯ ಹಾಕುವ ಸಾಧ್ಯತೆಯಿದೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us