ಸಚಿವ ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಸಚಿವ ಭೈರತಿ ಸುರೇಶ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಮೆಂಟ್ ಮಾಡಿದ ಆರೋಪದ ಮೇಲೆ ಸಿದ್ದರಾಮಯ್ಯ ಅಭಿಮಾನಿ ಜಯಕುಮಾರ್ ಅವರನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರ್.ಟಿ.ನಗರ ಠಾಣೆಯಲ್ಲಿ ಈ ಸಂಬಂಧ ಎಫ್.ಐ.ಆರ್. ದಾಖಲಾಗಿದ್ದು, ಇಬ್ಬರು ಆರೋಪಿಗಳ ಪೈಕಿ ವಿಲ್ಸನ್ ಗಾರ್ಡನ್ ನಿವಾಸಿ ಜಯಕುಮಾರ್ರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಬೆಂಗಳೂರು, ಆಗಸ್ಟ್ 06: ಸಚಿವ ಭೈರತಿ ಸುರೇಶ್ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಮೆಂಟ್ ಮಾಡಿದ ಆರೋಪದ ಮೇಲೆ ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಅಭಿಮಾನಿ ಜಯಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಭೈರತಿ ಸುರೇಶ್ ವಿರುದ್ಧ ಆಕ್ಷೇಪಾರ್ಹ ಕಾಮೆಂಟ್ಗಳನ್ನು ಪೋಸ್ಟ್ ಮಾಡಲಾಗಿದೆ ಎಂಬ ದೂರಿನ ಅನ್ವಯ ಆರ್.ಟಿ.ನಗರ ಠಾಣೆಯಲ್ಲಿ ಇಬ್ಬರ ವಿರುದ್ಧ ಎಫ್.ಐ.ಆರ್. ದಾಖಲಾಗಿತ್ತು. ಈ ಪ್ರಕರಣದಲ್ಲಿ ವಿಲ್ಸನ್ ಗಾರ್ಡನ್ ನಿವಾಸಿಯಾದ ಜಯಕುಮಾರ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಸ್ತುತ, ಜಯಕುಮಾರ್ ಪೊಲೀಸರ ವಿಚಾರಣೆಗೆ ಒಳಪಡಿಸಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us

