Karnataka Assembly Polls; ಸೋಲಿನ ಭೀತಿಯಿಂದ ಕಂಗೆಟ್ಟಿರುವ ಸಿದ್ದರಾಮಯ್ಯ ರಕ್ಷಣೆಗಾಗಿ ಮೊಮ್ಮಗನನ್ನು ಕರೆತಂದಿದ್ದಾರೆ: ಪ್ರತಾಪ್ ಸಿಂಹ, ಸಂಸದ

ಅರುಣ್​ ಕುಮಾರ್​ ಬೆಳ್ಳಿ

Updated on: Apr 21, 2023 | 3:23 PM

ಅಭಿವೃದ್ಧಿ ಅಂದರೇನು ಅನ್ನೋದನ್ನ ವರುಣಾ ಕ್ಷೇತ್ರದಲ್ಲಿ ಗೆದ್ದ ಮೇಲೆ ಸೋಮಣ್ಣ ಸಾಹೇಬರು ತೋರಿಸಲಿದ್ದಾರೆ ಎಂದು ಪ್ರತಾಪ್ ಸಿಂಹ ಹೇಳಿದರು.

ಮೈಸೂರು: ವರುಣಾದಲ್ಲಿ ತನಗ್ಯಾರು ಪ್ರತಿಸ್ಪರ್ಧಿ ಎಂದು ಹಮ್ಮಿನಿಂದ ಬೀಗುತ್ತಿದ್ದ ಸಿದ್ದರಾಮಯ್ಯ (Siddaramaiah) ಅವರೆದುರು ಭಾರತೀಯ ಜನತಾ ಪಕ್ಷ ವಿ ಸೋಮಣ್ಣ (V Somanna) ಅವರಿಗೆ ಟಿಕೆಟ್ ನೀಡಿದ ಬಳಿಕ ಕಂಗೆಟ್ಟು ತಮ್ಮ ರಕ್ಷಣೆಗಾಗಿ ಮೊಮ್ಮಗನನ್ನು (grandson) ಚುನಾವಣಾ ಪ್ರಚಾರಕ್ಕೆ ಕರೆತಂದಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಲೇವಡಿ ಮಾಡಿದರು. ಯಾವುದೇ ದೂರದೃಷ್ಟಿಯಿಲ್ಲದೆ 5 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮೆರೆದ ಸಿದ್ದರಾಮಯ್ಯ ಈಗ ಪಶ್ಚಾತ್ತಾಪಡುತ್ತಿದ್ದಾರೆ, ಅಭಿವೃದ್ಧಿ ಅಂದರೇನು ಅನ್ನೋದನ್ನ ವರುಣಾ ಕ್ಷೇತ್ರದಲ್ಲಿ ಗೆದ್ದ ಮೇಲೆ ಸೋಮಣ್ಣ ಸಾಹೇಬರು ತೋರಿಸಲಿದ್ದಾರೆ ಎಂದು ಪ್ರತಾಪ್ ಸಿಂಹ ಹೇಳಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.