Yuvakranti Convention: ಸಿದ್ದರಾಮಯ್ಯ ಭಾಷಣ ಮಾಡಲು ಬಂದಾಗ ಕಿವಿಗಡಚಿಕ್ಕುವಂತೆ ಕರತಾಡನ, ರಾಹುಲ್ ಖುಷ್ ಹುವಾ!?

|

Updated on: Mar 20, 2023 | 6:04 PM

ವೇದಿಕೆಯ ಮೇಲೆ ರಾಹುಲ್, ಮಲ್ಲಿಕಾರ್ಜುನ ಖರ್ಗೆ ಡಿಕೆ ಶಿವಕುಮಾರ್, ರಂದೀಪ್ ಸಿಂಗ್ ಸುರ್ಜೆವಾಲಾ ಮತ್ತು ಇತರ ಕಾಂಗ್ರೆಸ್ ನಾಯಕರಿಗೆ ಸಿದ್ದರಾಮಯ್ಯನವರ ಜನಪ್ರಿಯತೆ ಬಗ್ಗೆ ಸ್ಪಷ್ಟ ಸಂದೇಶ ಸಿಕ್ಕಿರಬಹುದು.

ಬೆಳಗಾವಿ: ಬೆಜೆಪಿ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಹೇಳಿದ್ದು ಸತ್ಯ ಮಾರಾಯ್ರೇ, ಸಿದ್ದರಾಮಯ್ಯ (Siddaramaiah) ನಿಜಕ್ಕೂ ಒಬ್ಬ ಜನನಾಯಕ! ಬೆಳಗಾವಿಯಲ್ಲಿ ಇಂದು ಕಾಂಗ್ರೆಸ್ ಪಕ್ಷ ಆಯೋಜಿಸಿದ ಯುವಕ್ರಾಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ದೆಹಲಿಯಿಂದ ಆಗಮಿಸಿದ ರಾಹುಲ್ ಗಾಂಧಿಯವರಿಗೆ (Rahul Gandhi) ಸಿಗದಷ್ಟು ಕರತಾಡನ, ಶಿಳ್ಳೆ ಸಿದ್ದರಾಮಯ್ಯನವರಿಗೆ ಸಿಕ್ಕಿತು. ವೇದಿಕೆಯ ಮೇಲೆ ರಾಹುಲ್, ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಡಿಕೆ ಶಿವಕುಮಾರ್, ರಂದೀಪ್ ಸಿಂಗ್ ಸುರ್ಜೆವಾಲಾ ಮತ್ತು ಇತರ ಕಾಂಗ್ರೆಸ್ ನಾಯಕರಿಗೆ ಸಿದ್ದರಾಮಯ್ಯನವರ ಜನಪ್ರಿಯತೆ ಬಗ್ಗೆ ಸ್ಪಷ್ಟ ಸಂದೇಶ ಸಿಕ್ಕಿರಬಹುದು. ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಹಾಜರಿದ್ದ ಸಹಸ್ರಾರು ಜನರ ಕಿವಿಗಡಚಿಕ್ಕುವಂಥ ಸ್ವಾಗತ ಸಿದ್ದರಾಮಯ್ಯನವರಿಗೆ ಸಿಗುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us on