ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ಡಿಕೆಶಿ, ಪರಮೇಶ್ವರ್​​ರಿಂದ ವಿಶೇಷ ಸ್ವಾಗತ

Edited By:

Updated on: Sep 10, 2026 | 1:29 PM

ಕರ್ನಾಟಕ ಸರ್ಕಾರದ 100 ದಿನಗಳ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಆಗಮಿಸಿದರು. ಕೋಟ್ಯಾಂತರ ಕನ್ನಡಿಗರ ವಿಶ್ವಾಸಕ್ಕೆ ಪೂರಕವಾಗಿ ಜನಕಲ್ಯಾಣ, ಆರ್ಥಿಕ ಪ್ರಗತಿ, ಸಾಮಾಜಿಕ ನ್ಯಾಯ ಮತ್ತು ದೂರದೃಷ್ಟಿಯ ಅಭಿವೃದ್ಧಿಯ ಗುರಿಗಳನ್ನು ಈ ನೂರು ದಿನಗಳಲ್ಲಿ ಸರ್ಕಾರ ಸಾಧಿಸಿದೆ.

ಬೆಂಗಳೂರು, ಸೆಪ್ಟೆಂಬರ್​​ 10: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ 100 ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ವಿಶೇಷ ಕಾರ್ಯಕ್ರಮ ನಡೆದಿದೆ. ಸಿಎಂ ಡಿಕೆಶಿ, ಡಿಸಿಎಂ ಪರಮೇಶ್ವರ್​​, ಸಚಿವರು ಸೇರಿದಂತೆ ಅನೇಕರು ಈ ಸಮಾರಂಭಕ್ಕೆ ಸಾಕ್ಷಿಯಾಗಿದ್ದಾರೆ. ಸರ್ಕಾರದ ನೂರು ದಿನಗಳ ಸಂಭ್ರಮ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೂ ವಿಶೇಷ ಆಹ್ವಾನ ನೀಡಲಾಗಿತ್ತು. ಕಾರ್ಯಕ್ರಮಕ್ಕೆ ಆಗಮಿಸಿದ ಅವರನ್ನು ಸಿಎಂ ಡಿಕೆಶಿ ಮತ್ತು ಡಿಸಿಎಂ ಪರಮೇಶ್ವರ್​​ ಅವರೇ ಅಕ್ಕಪಕ್ಕ ಸಾಗಿ ವೇದಿಕೆಗೆ ಕರೆದೊಯ್ದಿದ್ದು ಗಮನಸೆಳೆಯಿತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us