AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಮ್ ಕೋರ್ಟ್ ನಲ್ಲಿ ಸಮರ್ಪಕವಾಗಿ ವಾದ ಮಂಡಿಸಲು ಸಿದ್ದರಾಮಯ್ಯ ಸರ್ಕಾರ ವಿಫಲವಾಗಿದೆ: ಬಿಎಸ್ ಯಡಿಯೂರಪ್ಪ

ಸುಪ್ರೀಮ್ ಕೋರ್ಟ್ ನಲ್ಲಿ ಸಮರ್ಪಕವಾಗಿ ವಾದ ಮಂಡಿಸಲು ಸಿದ್ದರಾಮಯ್ಯ ಸರ್ಕಾರ ವಿಫಲವಾಗಿದೆ: ಬಿಎಸ್ ಯಡಿಯೂರಪ್ಪ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Sep 21, 2023 | 4:26 PM

Share

ಸರ್ಕಾರ ಸರ್ವೋಚ್ಛ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿ ಕಾವೇರಿ ನದಿ ನೀರಿನ ವಸ್ತುಸ್ಥಿತಿ ಅರಿಯಲು ಒಂದು ಸಮಿತಿಯನ್ನು ರಚಿಸುವಂತೆ ಮನವಿ ಮಾಡಬೇಕು, ಮತ್ತು ಸಮಿತಿ ನೀಡುವ ವರದಿಯನ್ನು ಆಧಾರವಾಗಿಟ್ಟ್ಟುಕೊಂಡು ನೀರು ಹಂಚಿಕೆ ತೀರ್ಪು ನೀಡಲು ವಿನಂತಿಸಿಕೊಳ್ಳಬೇಕು ಎಂದು ಯಡಿಯೂರಪ್ಪ ಹೇಳಿದರು. ಡಿಎಮ್ ಕೆ ಪಕ್ಷವು ಇಂಡಿಯ ಮೈತ್ರಿಕೂಟದ ಭಾಗವಾಗಿರುವುದರಿಂದ ಅಲ್ಲಿನ ಸರ್ಕಾರದೊಂದಿಗೆ ನೇರವಾಗಿ ಮಾತುಕತೆ ನಡೆಸಿಯೂ ಕರ್ನಾಟಕ ಸರ್ಕಾರ ಸಮಸ್ಯೆಯನ್ನು ಇತ್ಯರ್ಥಗೊಳಿಸಿಕೊಳ್ಳಬಹುದು ಎಂದು ಅವರು ಹೇಳಿದರು.

ಬೆಂಗಳೂರು: ಸುಪ್ರೀಮ್ ಕೋರ್ಟ್ ಆದೇಶ ಹೊರಡಿಸುವ ಮೊದಲೇ ತಮಿಳುನಾಡುಗೆ ನೀರು ಬಿಟ್ಟು ತಪ್ಪು ಮಾಡಿದ ಸಿದ್ದರಾಮಯ್ಯ ಸರ್ಕಾರ (Siddaramaiah government) ನಂತರ ನ್ಯಾಯಾಲಯದ ಮುಂದೆ ಅಂಕಿ-ಅಂಶಗಳೊಂದಿಗೆ ಸೂಕ್ತವಾಗಿ ಮತ್ತು ಸಮರ್ಥವಾಗಿ ವಾದ ಮಂಡಿಸದೆ ಮತ್ತಷ್ಟು ದೊಡ್ಡ ತಪ್ಪು ಮಾಡಿದೆ ಎಂದು ಹಿರಿಯ ಬಿಜೆಪಿ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಹೇಳಿದರು, ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗ ಮಾತಾಡಿದ ಅವರು; ಸುಪ್ರೀಮ್ ಕೋರ್ಟ್, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಅಂತ ಹೇಳಿದ್ದು ರಾಜ್ಯದಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಉಂಟು ಮಾಡಲಿದೆ ಅಂತ ಹೇಳಿದರು. ಈ ಹಿನ್ನೆಲೆಯಲ್ಲಿ ಸರ್ಕಾರ ಸರ್ವೋಚ್ಛ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿ ಕಾವೇರಿ ನದಿ ನೀರಿನ ವಸ್ತುಸ್ಥಿತಿ ಅರಿಯಲು ಒಂದು ಸಮಿತಿಯನ್ನು ರಚಿಸುವಂತೆ ಮನವಿ ಮಾಡಬೇಕು, ಮತ್ತು ಸಮಿತಿ ನೀಡುವ ವರದಿಯನ್ನು ಆಧಾರವಾಗಿಟ್ಟ್ಟುಕೊಂಡು ನೀರು ಹಂಚಿಕೆ ತೀರ್ಪು ನೀಡಲು ವಿನಂತಿಸಿಕೊಳ್ಳಬೇಕು ಎಂದು ಯಡಿಯೂರಪ್ಪ ಹೇಳಿದರು. ಡಿಎಮ್ ಕೆ ಪಕ್ಷವು ಇಂಡಿಯ ಮೈತ್ರಿಕೂಟದ ಭಾಗವಾಗಿರುವುದರಿಂದ ಅಲ್ಲಿನ ಸರ್ಕಾರದೊಂದಿಗೆ ನೇರವಾಗಿ ಮಾತುಕತೆ ನಡೆಸಿಯೂ ಕರ್ನಾಟಕ ಸರ್ಕಾರ ಸಮಸ್ಯೆಯನ್ನು ಇತ್ಯರ್ಥಗೊಳಿಸಿಕೊಳ್ಳಬಹುದು ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.